Homeಮುಖಪುಟಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

’ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ’ ಎಂದು ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಅಳವಡಿಸಿದ್ದ ವಿವಾದಿತ ಫಲಕ ತೆಗೆದುಹಾಕುವುದಾಗಿ ಶಿರಡಿಗೆ ಹೊರಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಮತ್ತು ಅವರ ಸಂಘದ ಕೆಲವು ಸದಸ್ಯರನ್ನು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಬಂಧಿಸಲಾಗಿದೆ.

ಸಾಯಿಬಾಬಾ ದೇವಸ್ಥಾನದ ಹೊರಗೆ ಹಾಕಿರುವ ಫಲಕದಲ್ಲಿ ಭಕ್ತರು “ಸುಸಂಸ್ಕೃತ” ರೀತಿಯಲ್ಲಿ ಬಟ್ಟೆ ಧರಿಸುವಂತೆ ಬರೆಯಲಾಗಿದೆ. ಈ ಫಲಕವನ್ನು ವಿರೋಧಿಸಿ, ಫಲಕ ತೆರವುಗೊಳಿಸಲು, ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರು ಶಿರಡಿಗೆ ತೆರಳುತ್ತಿದ್ದರು.

ಸಾಯಿಬಾಬಾ ಮಂದಿರದಲ್ಲಿ ಅಳವಡಿಸಲಾಗಿರುವ ಸಂದೇಶದ ಫಲಕವನ್ನು ಕೂಡಲೇ ತೆಗೆದು ಹಾಕಬೇಕು. ಇಲ್ಲದಿದ್ದರೇ ಡಿಸೆಂಬರ್‌ 10ರಂದು ‍ಸದಸ್ಯರೊಂದಿಗೆ ತೆರಳಿ ಆ ಫಲಕ ತೆರವು ಮಾಡುವುದಾಗಿ ತೃಪ್ತಿ ದೇಸಾಯಿ ಈ ಮೊದಲು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ತೃಪ್ತಿ ದೇಸಾಯಿಯವರ ಬಂಧನವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಆಕೆಯ ಬಂಧನವನ್ನು  ಸಂಭ್ರಮಿಸಿದ್ದಾರೆ.

ಸಾಯಿಬಾಬಾ ದೇವಸ್ಥಾನದಲ್ಲಿರುವ ಟ್ರಸ್ಟ್, ಸ್ಥಳೀಯರು ಮತ್ತು ಇತರ ಭಕ್ತರ ದೂರುಗಳನ್ನು ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಪವಿತ್ರ ಸ್ಥಳಕ್ಕೆ ಬಂದಾಗ “ಸುಸಂಸ್ಕೃತ” ರೀತಿಯಲ್ಲಿ ಅಥವಾ “ಭಾರತೀಯ ಸಂಸ್ಕೃತಿಯ” ಪ್ರಕಾರ ಬಟ್ಟೆ ಧರಿಸುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿ ಫಲಕ ಹಾಕಿದೆ.

ಈ ಕುರಿತು ಸ್ಪಷ್ಟಪಡಿಸಿರುವ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕನ್ಹುರಾಜ್ ಬಾಗಾಟೆ, “ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ” ಎಂದಿದ್ದಾರೆ.

ಮಂಗಳವಾರ ಉಪವಿಭಾಗದ ಮ್ಯಾಜಿಸ್ಟ್ರೇಟ್ ಗೋವಿಂದ್ ಶಿಂಧೆ, ತೃಪ್ತಿ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿಗೆ ಪ್ರವೇಶಿಸದಂತೆ ಸೂಚಿಸಿದ್ದರು.

ಆದರೆ, ದೇಸಾಯಿ ನೋಟಿಸ್ ಅನ್ನು ಧಿಕ್ಕರಿಸಿ ಅಲ್ಲಿನ ಸಾಯಿಬಾಬಾ ದೇವಸ್ಥಾನದಲ್ಲಿ ಫಲಕಗಳನ್ನು ತೆಗೆದುಹಾಕಲು ತನ್ನ 15ಕ್ಕೂ ಹೆಚ್ಚು ‘ಭೂಮಾತಾ ಬ್ರಿಗೇಡ್ ಸದಸ್ಯರ ಜೊತೆಗೆ ಶಿರಡಿಗೆ ತೆರಳುತ್ತಿದ್ದರು.

ದೇಸಾಯಿ ಸೇರಿದಂತೆ ಸುಮಾರು 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಹ್ಮದ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಟೀಲ್ ತಿಳಿಸಿದ್ದಾರೆ. ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 68 ರ ಅಡಿಯಲ್ಲಿ ದೇಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...