Homeಮುಖಪುಟಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

’ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ’ ಎಂದು ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಅಳವಡಿಸಿದ್ದ ವಿವಾದಿತ ಫಲಕ ತೆಗೆದುಹಾಕುವುದಾಗಿ ಶಿರಡಿಗೆ ಹೊರಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಮತ್ತು ಅವರ ಸಂಘದ ಕೆಲವು ಸದಸ್ಯರನ್ನು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಬಂಧಿಸಲಾಗಿದೆ.

ಸಾಯಿಬಾಬಾ ದೇವಸ್ಥಾನದ ಹೊರಗೆ ಹಾಕಿರುವ ಫಲಕದಲ್ಲಿ ಭಕ್ತರು “ಸುಸಂಸ್ಕೃತ” ರೀತಿಯಲ್ಲಿ ಬಟ್ಟೆ ಧರಿಸುವಂತೆ ಬರೆಯಲಾಗಿದೆ. ಈ ಫಲಕವನ್ನು ವಿರೋಧಿಸಿ, ಫಲಕ ತೆರವುಗೊಳಿಸಲು, ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರು ಶಿರಡಿಗೆ ತೆರಳುತ್ತಿದ್ದರು.

ಸಾಯಿಬಾಬಾ ಮಂದಿರದಲ್ಲಿ ಅಳವಡಿಸಲಾಗಿರುವ ಸಂದೇಶದ ಫಲಕವನ್ನು ಕೂಡಲೇ ತೆಗೆದು ಹಾಕಬೇಕು. ಇಲ್ಲದಿದ್ದರೇ ಡಿಸೆಂಬರ್‌ 10ರಂದು ‍ಸದಸ್ಯರೊಂದಿಗೆ ತೆರಳಿ ಆ ಫಲಕ ತೆರವು ಮಾಡುವುದಾಗಿ ತೃಪ್ತಿ ದೇಸಾಯಿ ಈ ಮೊದಲು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ತೃಪ್ತಿ ದೇಸಾಯಿಯವರ ಬಂಧನವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಆಕೆಯ ಬಂಧನವನ್ನು  ಸಂಭ್ರಮಿಸಿದ್ದಾರೆ.

ಸಾಯಿಬಾಬಾ ದೇವಸ್ಥಾನದಲ್ಲಿರುವ ಟ್ರಸ್ಟ್, ಸ್ಥಳೀಯರು ಮತ್ತು ಇತರ ಭಕ್ತರ ದೂರುಗಳನ್ನು ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಪವಿತ್ರ ಸ್ಥಳಕ್ಕೆ ಬಂದಾಗ “ಸುಸಂಸ್ಕೃತ” ರೀತಿಯಲ್ಲಿ ಅಥವಾ “ಭಾರತೀಯ ಸಂಸ್ಕೃತಿಯ” ಪ್ರಕಾರ ಬಟ್ಟೆ ಧರಿಸುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿ ಫಲಕ ಹಾಕಿದೆ.

ಈ ಕುರಿತು ಸ್ಪಷ್ಟಪಡಿಸಿರುವ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕನ್ಹುರಾಜ್ ಬಾಗಾಟೆ, “ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ” ಎಂದಿದ್ದಾರೆ.

ಮಂಗಳವಾರ ಉಪವಿಭಾಗದ ಮ್ಯಾಜಿಸ್ಟ್ರೇಟ್ ಗೋವಿಂದ್ ಶಿಂಧೆ, ತೃಪ್ತಿ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿಗೆ ಪ್ರವೇಶಿಸದಂತೆ ಸೂಚಿಸಿದ್ದರು.

ಆದರೆ, ದೇಸಾಯಿ ನೋಟಿಸ್ ಅನ್ನು ಧಿಕ್ಕರಿಸಿ ಅಲ್ಲಿನ ಸಾಯಿಬಾಬಾ ದೇವಸ್ಥಾನದಲ್ಲಿ ಫಲಕಗಳನ್ನು ತೆಗೆದುಹಾಕಲು ತನ್ನ 15ಕ್ಕೂ ಹೆಚ್ಚು ‘ಭೂಮಾತಾ ಬ್ರಿಗೇಡ್ ಸದಸ್ಯರ ಜೊತೆಗೆ ಶಿರಡಿಗೆ ತೆರಳುತ್ತಿದ್ದರು.

ದೇಸಾಯಿ ಸೇರಿದಂತೆ ಸುಮಾರು 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಹ್ಮದ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಟೀಲ್ ತಿಳಿಸಿದ್ದಾರೆ. ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 68 ರ ಅಡಿಯಲ್ಲಿ ದೇಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...