Homeಮುಖಪುಟಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

’ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ’ ಎಂದು ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಅಳವಡಿಸಿದ್ದ ವಿವಾದಿತ ಫಲಕ ತೆಗೆದುಹಾಕುವುದಾಗಿ ಶಿರಡಿಗೆ ಹೊರಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಮತ್ತು ಅವರ ಸಂಘದ ಕೆಲವು ಸದಸ್ಯರನ್ನು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಬಂಧಿಸಲಾಗಿದೆ.

ಸಾಯಿಬಾಬಾ ದೇವಸ್ಥಾನದ ಹೊರಗೆ ಹಾಕಿರುವ ಫಲಕದಲ್ಲಿ ಭಕ್ತರು “ಸುಸಂಸ್ಕೃತ” ರೀತಿಯಲ್ಲಿ ಬಟ್ಟೆ ಧರಿಸುವಂತೆ ಬರೆಯಲಾಗಿದೆ. ಈ ಫಲಕವನ್ನು ವಿರೋಧಿಸಿ, ಫಲಕ ತೆರವುಗೊಳಿಸಲು, ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರು ಶಿರಡಿಗೆ ತೆರಳುತ್ತಿದ್ದರು.

ಸಾಯಿಬಾಬಾ ಮಂದಿರದಲ್ಲಿ ಅಳವಡಿಸಲಾಗಿರುವ ಸಂದೇಶದ ಫಲಕವನ್ನು ಕೂಡಲೇ ತೆಗೆದು ಹಾಕಬೇಕು. ಇಲ್ಲದಿದ್ದರೇ ಡಿಸೆಂಬರ್‌ 10ರಂದು ‍ಸದಸ್ಯರೊಂದಿಗೆ ತೆರಳಿ ಆ ಫಲಕ ತೆರವು ಮಾಡುವುದಾಗಿ ತೃಪ್ತಿ ದೇಸಾಯಿ ಈ ಮೊದಲು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ತೃಪ್ತಿ ದೇಸಾಯಿಯವರ ಬಂಧನವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಆಕೆಯ ಬಂಧನವನ್ನು  ಸಂಭ್ರಮಿಸಿದ್ದಾರೆ.

ಸಾಯಿಬಾಬಾ ದೇವಸ್ಥಾನದಲ್ಲಿರುವ ಟ್ರಸ್ಟ್, ಸ್ಥಳೀಯರು ಮತ್ತು ಇತರ ಭಕ್ತರ ದೂರುಗಳನ್ನು ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಪವಿತ್ರ ಸ್ಥಳಕ್ಕೆ ಬಂದಾಗ “ಸುಸಂಸ್ಕೃತ” ರೀತಿಯಲ್ಲಿ ಅಥವಾ “ಭಾರತೀಯ ಸಂಸ್ಕೃತಿಯ” ಪ್ರಕಾರ ಬಟ್ಟೆ ಧರಿಸುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿ ಫಲಕ ಹಾಕಿದೆ.

ಈ ಕುರಿತು ಸ್ಪಷ್ಟಪಡಿಸಿರುವ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕನ್ಹುರಾಜ್ ಬಾಗಾಟೆ, “ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ” ಎಂದಿದ್ದಾರೆ.

ಮಂಗಳವಾರ ಉಪವಿಭಾಗದ ಮ್ಯಾಜಿಸ್ಟ್ರೇಟ್ ಗೋವಿಂದ್ ಶಿಂಧೆ, ತೃಪ್ತಿ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿಗೆ ಪ್ರವೇಶಿಸದಂತೆ ಸೂಚಿಸಿದ್ದರು.

ಆದರೆ, ದೇಸಾಯಿ ನೋಟಿಸ್ ಅನ್ನು ಧಿಕ್ಕರಿಸಿ ಅಲ್ಲಿನ ಸಾಯಿಬಾಬಾ ದೇವಸ್ಥಾನದಲ್ಲಿ ಫಲಕಗಳನ್ನು ತೆಗೆದುಹಾಕಲು ತನ್ನ 15ಕ್ಕೂ ಹೆಚ್ಚು ‘ಭೂಮಾತಾ ಬ್ರಿಗೇಡ್ ಸದಸ್ಯರ ಜೊತೆಗೆ ಶಿರಡಿಗೆ ತೆರಳುತ್ತಿದ್ದರು.

ದೇಸಾಯಿ ಸೇರಿದಂತೆ ಸುಮಾರು 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಹ್ಮದ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಟೀಲ್ ತಿಳಿಸಿದ್ದಾರೆ. ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 68 ರ ಅಡಿಯಲ್ಲಿ ದೇಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...