Homeಮುಖಪುಟಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

’ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ’ ಎಂದು ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಅಳವಡಿಸಿದ್ದ ವಿವಾದಿತ ಫಲಕ ತೆಗೆದುಹಾಕುವುದಾಗಿ ಶಿರಡಿಗೆ ಹೊರಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಮತ್ತು ಅವರ ಸಂಘದ ಕೆಲವು ಸದಸ್ಯರನ್ನು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಬಂಧಿಸಲಾಗಿದೆ.

ಸಾಯಿಬಾಬಾ ದೇವಸ್ಥಾನದ ಹೊರಗೆ ಹಾಕಿರುವ ಫಲಕದಲ್ಲಿ ಭಕ್ತರು “ಸುಸಂಸ್ಕೃತ” ರೀತಿಯಲ್ಲಿ ಬಟ್ಟೆ ಧರಿಸುವಂತೆ ಬರೆಯಲಾಗಿದೆ. ಈ ಫಲಕವನ್ನು ವಿರೋಧಿಸಿ, ಫಲಕ ತೆರವುಗೊಳಿಸಲು, ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರು ಶಿರಡಿಗೆ ತೆರಳುತ್ತಿದ್ದರು.

ಸಾಯಿಬಾಬಾ ಮಂದಿರದಲ್ಲಿ ಅಳವಡಿಸಲಾಗಿರುವ ಸಂದೇಶದ ಫಲಕವನ್ನು ಕೂಡಲೇ ತೆಗೆದು ಹಾಕಬೇಕು. ಇಲ್ಲದಿದ್ದರೇ ಡಿಸೆಂಬರ್‌ 10ರಂದು ‍ಸದಸ್ಯರೊಂದಿಗೆ ತೆರಳಿ ಆ ಫಲಕ ತೆರವು ಮಾಡುವುದಾಗಿ ತೃಪ್ತಿ ದೇಸಾಯಿ ಈ ಮೊದಲು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ತೃಪ್ತಿ ದೇಸಾಯಿಯವರ ಬಂಧನವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಆಕೆಯ ಬಂಧನವನ್ನು  ಸಂಭ್ರಮಿಸಿದ್ದಾರೆ.

ಸಾಯಿಬಾಬಾ ದೇವಸ್ಥಾನದಲ್ಲಿರುವ ಟ್ರಸ್ಟ್, ಸ್ಥಳೀಯರು ಮತ್ತು ಇತರ ಭಕ್ತರ ದೂರುಗಳನ್ನು ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಪವಿತ್ರ ಸ್ಥಳಕ್ಕೆ ಬಂದಾಗ “ಸುಸಂಸ್ಕೃತ” ರೀತಿಯಲ್ಲಿ ಅಥವಾ “ಭಾರತೀಯ ಸಂಸ್ಕೃತಿಯ” ಪ್ರಕಾರ ಬಟ್ಟೆ ಧರಿಸುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿ ಫಲಕ ಹಾಕಿದೆ.

ಈ ಕುರಿತು ಸ್ಪಷ್ಟಪಡಿಸಿರುವ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕನ್ಹುರಾಜ್ ಬಾಗಾಟೆ, “ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ” ಎಂದಿದ್ದಾರೆ.

ಮಂಗಳವಾರ ಉಪವಿಭಾಗದ ಮ್ಯಾಜಿಸ್ಟ್ರೇಟ್ ಗೋವಿಂದ್ ಶಿಂಧೆ, ತೃಪ್ತಿ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿಗೆ ಪ್ರವೇಶಿಸದಂತೆ ಸೂಚಿಸಿದ್ದರು.

ಆದರೆ, ದೇಸಾಯಿ ನೋಟಿಸ್ ಅನ್ನು ಧಿಕ್ಕರಿಸಿ ಅಲ್ಲಿನ ಸಾಯಿಬಾಬಾ ದೇವಸ್ಥಾನದಲ್ಲಿ ಫಲಕಗಳನ್ನು ತೆಗೆದುಹಾಕಲು ತನ್ನ 15ಕ್ಕೂ ಹೆಚ್ಚು ‘ಭೂಮಾತಾ ಬ್ರಿಗೇಡ್ ಸದಸ್ಯರ ಜೊತೆಗೆ ಶಿರಡಿಗೆ ತೆರಳುತ್ತಿದ್ದರು.

ದೇಸಾಯಿ ಸೇರಿದಂತೆ ಸುಮಾರು 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಹ್ಮದ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಟೀಲ್ ತಿಳಿಸಿದ್ದಾರೆ. ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 68 ರ ಅಡಿಯಲ್ಲಿ ದೇಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...