Homeಮುಖಪುಟಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

’ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ’ ಎಂದು ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಅಳವಡಿಸಿದ್ದ ವಿವಾದಿತ ಫಲಕ ತೆಗೆದುಹಾಕುವುದಾಗಿ ಶಿರಡಿಗೆ ಹೊರಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಮತ್ತು ಅವರ ಸಂಘದ ಕೆಲವು ಸದಸ್ಯರನ್ನು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಬಂಧಿಸಲಾಗಿದೆ.

ಸಾಯಿಬಾಬಾ ದೇವಸ್ಥಾನದ ಹೊರಗೆ ಹಾಕಿರುವ ಫಲಕದಲ್ಲಿ ಭಕ್ತರು “ಸುಸಂಸ್ಕೃತ” ರೀತಿಯಲ್ಲಿ ಬಟ್ಟೆ ಧರಿಸುವಂತೆ ಬರೆಯಲಾಗಿದೆ. ಈ ಫಲಕವನ್ನು ವಿರೋಧಿಸಿ, ಫಲಕ ತೆರವುಗೊಳಿಸಲು, ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರು ಶಿರಡಿಗೆ ತೆರಳುತ್ತಿದ್ದರು.

ಸಾಯಿಬಾಬಾ ಮಂದಿರದಲ್ಲಿ ಅಳವಡಿಸಲಾಗಿರುವ ಸಂದೇಶದ ಫಲಕವನ್ನು ಕೂಡಲೇ ತೆಗೆದು ಹಾಕಬೇಕು. ಇಲ್ಲದಿದ್ದರೇ ಡಿಸೆಂಬರ್‌ 10ರಂದು ‍ಸದಸ್ಯರೊಂದಿಗೆ ತೆರಳಿ ಆ ಫಲಕ ತೆರವು ಮಾಡುವುದಾಗಿ ತೃಪ್ತಿ ದೇಸಾಯಿ ಈ ಮೊದಲು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ತೃಪ್ತಿ ದೇಸಾಯಿಯವರ ಬಂಧನವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಆಕೆಯ ಬಂಧನವನ್ನು  ಸಂಭ್ರಮಿಸಿದ್ದಾರೆ.

ಸಾಯಿಬಾಬಾ ದೇವಸ್ಥಾನದಲ್ಲಿರುವ ಟ್ರಸ್ಟ್, ಸ್ಥಳೀಯರು ಮತ್ತು ಇತರ ಭಕ್ತರ ದೂರುಗಳನ್ನು ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಪವಿತ್ರ ಸ್ಥಳಕ್ಕೆ ಬಂದಾಗ “ಸುಸಂಸ್ಕೃತ” ರೀತಿಯಲ್ಲಿ ಅಥವಾ “ಭಾರತೀಯ ಸಂಸ್ಕೃತಿಯ” ಪ್ರಕಾರ ಬಟ್ಟೆ ಧರಿಸುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿ ಫಲಕ ಹಾಕಿದೆ.

ಈ ಕುರಿತು ಸ್ಪಷ್ಟಪಡಿಸಿರುವ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕನ್ಹುರಾಜ್ ಬಾಗಾಟೆ, “ಇದು ಕೇವಲ ಮನವಿಯಾಗಿದೆ. ಟ್ರಸ್ಟ್ ಭಕ್ತರ ಮೇಲೆ ಯಾವುದೇ ಡ್ರೆಸ್ ಕೋಡ್ ಹೇರಿಲ್ಲ” ಎಂದಿದ್ದಾರೆ.

ಮಂಗಳವಾರ ಉಪವಿಭಾಗದ ಮ್ಯಾಜಿಸ್ಟ್ರೇಟ್ ಗೋವಿಂದ್ ಶಿಂಧೆ, ತೃಪ್ತಿ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿಗೆ ಪ್ರವೇಶಿಸದಂತೆ ಸೂಚಿಸಿದ್ದರು.

ಆದರೆ, ದೇಸಾಯಿ ನೋಟಿಸ್ ಅನ್ನು ಧಿಕ್ಕರಿಸಿ ಅಲ್ಲಿನ ಸಾಯಿಬಾಬಾ ದೇವಸ್ಥಾನದಲ್ಲಿ ಫಲಕಗಳನ್ನು ತೆಗೆದುಹಾಕಲು ತನ್ನ 15ಕ್ಕೂ ಹೆಚ್ಚು ‘ಭೂಮಾತಾ ಬ್ರಿಗೇಡ್ ಸದಸ್ಯರ ಜೊತೆಗೆ ಶಿರಡಿಗೆ ತೆರಳುತ್ತಿದ್ದರು.

ದೇಸಾಯಿ ಸೇರಿದಂತೆ ಸುಮಾರು 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಹ್ಮದ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಟೀಲ್ ತಿಳಿಸಿದ್ದಾರೆ. ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 68 ರ ಅಡಿಯಲ್ಲಿ ದೇಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...