Homeಕರ್ನಾಟಕಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತು ಹೋರಾಟಗಾರರು, ಕಾನೂನು ತಜ್ಞರು ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಆದರ್ಶ್ ಅಯ್ಯರ್, ಇದೊಂದು ಐತಿಹಾಸಿಕ ತೀರ್ಪು. ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಬಹಳ ಕೆಟ್ಟದಾದ ದೇಣಿಗೆ ಪದ್ದತಿ ಬಂದಿತ್ತು. ಅದು ಎಲ್ಲಾ ಭ್ರಷ್ಟಾಚಾರಗಳಿಗೂ ಮಿಗಿಲಾಗಿತ್ತು. ಕಾರ್ಪೋರೇಟ್ ಕಂಪನಿಗಳು ಕಳ್ಳ ದಾರಿಯಲ್ಲಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿತ್ತು. ಆ ವ್ಯವಸ್ಥೆಯನ್ನು ಒಡೆದು ಹಾಕುವ ಮೂಲಕ ಸುಪ್ರೀಂ ಕೋರ್ಟ್‌ ಪ್ರಜಾಪ್ರಭುತ್ವವನ್ನು ಬಲಪಡಿಸಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಸರ್ಕಾರ ಯಾವ ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸಿತ್ತೋ, ಅದೇ ರೀತಿ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುನ್ನಡೆಯುತ್ತಿದೆ. ಅದಕ್ಕೆ ಲಗಾಮು ಹಾಕುವಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ಬಹಳ ಮಹತ್ವದ್ದಾಗಿದೆ. ಸರ್ಕಾರಗಳು ಅನಿಯಂತ್ರಿತ ಅಥವಾ ಸರ್ವಾಧಿಕಾರಿ ಧೋರಣೆ ಅನುಸರಿಸಲು ಬೇಕಾದಷ್ಟು ಹಣ ಬೇಕು. ಈಗಿನ ಕೇಂದ್ರ ಸರ್ಕಾರಕ್ಕೆ ಆ ಹಣ ಚುನಾವಣಾ ಬಾಂಡ್‌ ಮೂಲಕ ಸಿಗುತ್ತಿತ್ತು. ಅಂತಹ ಅಕ್ರಮ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಕಡಿವಾಣ ಹಾಕಿದೆ ಎಂದು ಹೇಳಿದ್ದಾರೆ.

ಬಾಂಡ್ ಮಾಹಿತಿ ನೀಡಲು ಎಸ್‌ಬಿಐ, ಚುನಾವಣಾ ಆಯೋಗಕ್ಕೆ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್ ನೀಡುತ್ತಿತ್ತು. ಹಲವು ಕಂಪನಿಗಳು, ಉದ್ಯಮಿಗಳು ರಾಜಕೀಯ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಕೋಟ್ಯಾಂತರ ರೂಪಾಯಿ ಹಣ ಈಗಾಗಲೇ ನೀಡಿದ್ದಾರೆ. ಯಾರು, ಯಾವಾಗ, ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಮಾರ್ಚ್‌ ಒಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವಾಗ ಎಸ್‌ಬಿಐಗೆ ಸೂಚಿಸಿದೆ. ಅಲ್ಲದೆ, ಮಾರ್ಚ್ 13ರ ಒಳಗೆ ಚುನಾವಣಾ ಆಯೋಗ ಈ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶಿಸಿದೆ. ಇದೊಂದು ಮಹತ್ವದ ಆದೇಶ. ಈ ಮೂಲಕ ಯಾವ ಪಕ್ಷಕ್ಕೆ ಯಾರು ಎಷ್ಟು ಹಣ ಕೊಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಲಿದೆ ಎಂದು ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನಿಂದ ಅದಾನಿ, ಅಂಬಾನಿ, ವೇದಾಂತದಂತಹ ದೊಡ್ಡ ದೊಡ್ಡ ಕಂಪನಿಗಳು ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ, ವಿಶೇಷವಾಗಿ ಬಿಜೆಪಿಗೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗಲಿದೆ. ಅದಾನಿ, ಅಂಬಾನಿಯವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳನ್ನು ಮಾರುತ್ತಿದ್ದರು. ಅದರ ದುಡ್ಡು ಎಲ್ಲಿಗೆ ಹೋಗುತ್ತಿತ್ತು ಎಂದು ಇದುವರೆಗೆ ಮಾಹಿತಿ ಹೊರ ಬರುತ್ತಿರಲಿಲ್ಲ. ಉದಾಹರಣೆಗೆ, ರಿಲಾಯನ್ಸ್ ಕಮ್ಯೂನಿಕೇಷನ್ಸ್ ಎಂಬ ಅನಿಲ್ ಅಂಬಾನಿಯವರ ಕಂಪನಿ ಇತ್ತು. ಅದರ ಮೌಲ್ಯ ಅಂದಾಜು 49 ಸಾವಿರ ಕೋಟಿ ರೂಪಾಯಿ ಇತ್ತು. ಆದರೆ, ಅದನ್ನು ಕೇವಲ 425 ಕೋಟಿ ರೂಪಾಯಿಗೆ ಮುಖೇಶ್ ಅಂಬಾನಿ ಖರೀದಿಸಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ, ಉಳಿದ 48 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? ಇಂತಹ ಮಾಹಿತಿಗಳು ಜನರಿಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆ: 

ಚುನಾವಣಾ ಬಾಂಡ್‌ಗಳಿಂದ ಮಾಹಿತಿ ಹಕ್ಕು ಕಾಯ್ದೆಯ ಮೇಲೆ ದೊಡ್ಡ ಪರಿಣಾಮ ಬೀರಿತ್ತು. ಜನರಿಗೆ ರಾಜಕೀಯ ಪಕ್ಷಗಳ ಹಣದ ಕುರಿತು ಮಾಹಿತಿ ಸಿಗುತ್ತಿರಲಿಲ್ಲ. ಒಂದು ಬಾರಿ ಕೇಂದ್ರ ಮಾಹಿತಿ ಹಕ್ಕು ಆಯೋಗ ಚುನಾವಣಾ ಬಾಂಡ್ ಕುರಿತ ಮಾಹಿತಿಯನ್ನುಆರ್‌ಟಿಐ ಮೂಲಕ ನೀಡುವಂತೆ ಸೂಚಿಸಿತ್ತು. ಆದರೆ, ಅದರ ವಿರುದ್ದ ಕೇಂದ್ರ ಸರ್ಕಾರ ನ್ಯಾಯಾಲಯದಿಂದ ತಡೆ ತಂದಿತ್ತು. ಈ ಮೂಲಕ ರಾಜಕೀಯ ಪಕ್ಷಗಳು ಒಂದು ಕಡೆ ದುಡ್ಡು ಮಾಡುತ್ತಿತ್ತು. ಮತ್ತೊಂದೆಡೆ ಜನರಿಗೆ ಮಾಹಿತಿ ನೀಡುತ್ತಿರಲಿಲ್ಲ ಎಂದು ಆದರ್ಶ್‌ ಅಯ್ಯರ್ ತಿಳಿಸಿದ್ದಾರೆ.

ತಿದ್ದುಪಡಿಗಳು ಅಸಂವಿಧಾನಿಕ

2017ರಲ್ಲಿ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಗಿತ್ತು. ಕೇವಲ ಹಣಕಾಸು ಕಾಯ್ದೆ ಮಾತ್ರವಲ್ಲದೆ, ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಜನಪ್ರತಿನಿಧಿಗಳ ಕಾಯ್ದೆ ಎಲ್ಲದಕ್ಕೂ ತಿದ್ದುಪಡಿ ತಂದು ಚುನಾವಣಾ ಬಾಂಡ್ ಜಾರಿಗೊಳಿಸಿದ್ದರು. ಈ ತಿದ್ದುಪಡಿಗೂ ಮೊದಲು ಕಂಪನಿಗಳು ರಾಜಕೀಯ ಪಕ್ಷಗಳಿಗೆ ತಮ್ಮ ಲಾಭದ ಗರಿಷ್ಠ ಶೇ.7ರಷ್ಟು ಮಾತ್ರ ದೇಣಿಗೆ ನೀಡಬಹುದಿತ್ತು. ಅದನ್ನು ತೆಗೆದು ಹಾಕಿದ್ದರು. ಬಿಜೆಪಿಯವರು ತಮ್ಮ ಬಹುಮತ ದುರುಪಯೋಗ ಮಾಡಿಕೊಂಡು ಲಾಭಕ್ಕೆ ಬಳಸುತ್ತಿದ್ದರು. ಪ್ರಜಾಪ್ರಭುತ್ವವನ್ನೇ ತಿರುಚಿದ್ದರು. ಸುಪ್ರೀಂ ಕೋರ್ಟ್‌ ಈ ಎಲ್ಲಾ ತಿದ್ದುಪಡಿಗಳನ್ನು ಅಸಂವಿಧಾನಿಕ ಎಂದು ಹೇಳಿದೆ ಎಂದಿದ್ದಾರೆ.

ಜನರಿಗೆ ಜಾಗೃತಿ ಮೂಡಿಸಬೇಕು:

ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳ ನಡೆಸುತ್ತಿದ್ದ ‘ಕಾನೂನಾತ್ಮಕ ಭ್ರಷ್ಟಾಚಾರ’ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಚುನಾವಣಾ ಬಾಂಡ್‌ನಿಂದ ರಾಜಕೀಯ ಪಕ್ಷಗಳು ಮತ್ತು ಅವರ ಜೊತೆಗಿರುವ ಬಂಡವಾಳ ಶಾಹಿಗಳಿಗೆ ಲಾಭ ಆಗುತ್ತಿದೆ ಎಂದು ಜನರಿಗೆ ತಿಳಿಸಬೇಕು. ಜನರು ಎಚ್ಚೆತ್ತುಕೊಂಡೆ ಮುಂದಿನ ಚುನಾವಣೆಯಲ್ಲಿ ಇದು ಖಂಡಿತಾ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ತೀರ್ಪು ಸ್ವಾಗತಾರ್ಹ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ 

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರು ಮಾತನಾಡಿ, “ಸುಪ್ರೀಂ ಕೋರ್ಟ್‌ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಇದು ಬಹಳ ಸಂತೋಷದ ವಿಷಯ. 2017ರ ಹಣಕಾಸು ಕಾಯ್ದೆಯ ತಿದ್ದುಪಡಿಯೇ ಸರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿ ಪ್ರಕಾರ, ಇದುವರೆಗೆ ಸಂಗ್ರವಾದ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐ ಮತ್ತು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಇದು ಅತ್ಯಂತ ಸ್ವಾಗತಾರ್ಹ” ಆದೇಶ ಎಂದಿದ್ದಾರೆ.

ಭವಿಷ್ಯದಲ್ಲಿ ಸರ್ಕಾರ ಇಂತಹ ದುಷ್ಟ ಆಲೋಚನೆ ಮಾಡದಿರಲಿ : ಖರ್ಗೆ

ಸುಪ್ರೀಂ ತೀರ್ಪನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭವಿಷ್ಯದಲ್ಲಿ ಸರ್ಕಾರವು ಇಂತಹ ದುಷ್ಟ ಆಲೋಚನೆಗಳನ್ನು ಮಾಡುವುದನ್ನು ನಿಲ್ಲಿಸಲಿದೆ ಎಂದು ನಾನು ಭಾವಿಸುತ್ತೇನೆ. ಈ ಯೋಜನೆಯನ್ನು ಪ್ರಾರಂಭಿಸಿದಾಗಲೇ ಕಾಂಗ್ರೆಸ್ ಪಕ್ಷವು ಇದು ಪಾರದರ್ಶಕತೆಯಿಂದ ಕೂಡಿಲ್ಲ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿತ್ತು. ಅಲ್ಲದೆ, 2019ರ ಚುನಾವಣಾ ಪ್ರಣಾಳಿಕೆಯಲ್ಲಿ, ಮೋದಿ ಸರ್ಕಾರದ ಈ ಸಂಶಯಾಸ್ಪದ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು” ಎಂದಿದ್ದಾರೆ.

ತೀರ್ಪು ದೊಡ್ಡ ಪರಿಣಾಮ ಬೀರಲಿದೆ : ಕಪಿಲ್ ಸಿಬಲ್

ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತೀರ್ಪಿನ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಎಲ್ಲಾ ಹಣ ರಾಜಕೀಯ ಪಕ್ಷಗಳು ಪಡೆದಿದೆ. ಅದರಲ್ಲೂ ಬಿಜೆಪಿ ಗರಿಷ್ಠ ಮೊತ್ತವನ್ನು ಪಡೆದಿದೆ ಎಂಬ ಸರಳ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತೀರ್ಪು ಖಷಿ ಕೊಟ್ಟಿದೆ. ಚುನಾವಣಾ ಬಾಂಡ್ ಯೋಜನೆಯ ಸ್ಥಗಿತ ನಿಸ್ಸಂಶಯವಾಗಿಯೂ ದೊಡ್ಡ ಪರಿಣಾಮ ಬೀರಲಿದೆ” ಎಂದಿದ್ದಾರೆ

ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಎಸ್‌ವೈ ಖುರೈಶಿ

ಸುಪ್ರೀಂ ತೀರ್ಪಿನ ಕುರಿತು ಮಾತನಾಡಿದ ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, “ಕಳೆದ 5-7 ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ಅತ್ಯಂತ ಐತಿಹಾಸಿಕ ತೀರ್ಪು ಇದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ. ಕಳೆದ ಹಲವು ವರ್ಷಗಳಿಂದ ನಾವೆಲ್ಲರೂ ಇದರ ಬಗ್ಗೆ ಕಾಳಜಿ ವಹಿಸಿದ್ದೇವೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಪ್ರತಿಯೊಬ್ಬರೂ ಈ ಯೋಜನೆ ವಿರುದ್ದ ಪ್ರತಿಭಟಿಸುತ್ತಿದ್ದರು. ನಾನೇ ಹಲವಾರು ಲೇಖನಗಳನ್ನು ಬರೆದಿದ್ದೇನೆ ಮತ್ತು ಮಾಧ್ಯಮಗಳೊಂದಿಗೆ ಹಲವು ಬಾರಿ ಮಾತನಾಡಿದ್ದೇನೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗೂ ಈ ತೀರ್ಪಿನಲ್ಲಿ ಉತ್ತರ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...