Homeಕರ್ನಾಟಕಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತು ಹೋರಾಟಗಾರರು, ಕಾನೂನು ತಜ್ಞರು ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಆದರ್ಶ್ ಅಯ್ಯರ್, ಇದೊಂದು ಐತಿಹಾಸಿಕ ತೀರ್ಪು. ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಬಹಳ ಕೆಟ್ಟದಾದ ದೇಣಿಗೆ ಪದ್ದತಿ ಬಂದಿತ್ತು. ಅದು ಎಲ್ಲಾ ಭ್ರಷ್ಟಾಚಾರಗಳಿಗೂ ಮಿಗಿಲಾಗಿತ್ತು. ಕಾರ್ಪೋರೇಟ್ ಕಂಪನಿಗಳು ಕಳ್ಳ ದಾರಿಯಲ್ಲಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿತ್ತು. ಆ ವ್ಯವಸ್ಥೆಯನ್ನು ಒಡೆದು ಹಾಕುವ ಮೂಲಕ ಸುಪ್ರೀಂ ಕೋರ್ಟ್‌ ಪ್ರಜಾಪ್ರಭುತ್ವವನ್ನು ಬಲಪಡಿಸಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಸರ್ಕಾರ ಯಾವ ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸಿತ್ತೋ, ಅದೇ ರೀತಿ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುನ್ನಡೆಯುತ್ತಿದೆ. ಅದಕ್ಕೆ ಲಗಾಮು ಹಾಕುವಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ಬಹಳ ಮಹತ್ವದ್ದಾಗಿದೆ. ಸರ್ಕಾರಗಳು ಅನಿಯಂತ್ರಿತ ಅಥವಾ ಸರ್ವಾಧಿಕಾರಿ ಧೋರಣೆ ಅನುಸರಿಸಲು ಬೇಕಾದಷ್ಟು ಹಣ ಬೇಕು. ಈಗಿನ ಕೇಂದ್ರ ಸರ್ಕಾರಕ್ಕೆ ಆ ಹಣ ಚುನಾವಣಾ ಬಾಂಡ್‌ ಮೂಲಕ ಸಿಗುತ್ತಿತ್ತು. ಅಂತಹ ಅಕ್ರಮ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಕಡಿವಾಣ ಹಾಕಿದೆ ಎಂದು ಹೇಳಿದ್ದಾರೆ.

ಬಾಂಡ್ ಮಾಹಿತಿ ನೀಡಲು ಎಸ್‌ಬಿಐ, ಚುನಾವಣಾ ಆಯೋಗಕ್ಕೆ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್ ನೀಡುತ್ತಿತ್ತು. ಹಲವು ಕಂಪನಿಗಳು, ಉದ್ಯಮಿಗಳು ರಾಜಕೀಯ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಕೋಟ್ಯಾಂತರ ರೂಪಾಯಿ ಹಣ ಈಗಾಗಲೇ ನೀಡಿದ್ದಾರೆ. ಯಾರು, ಯಾವಾಗ, ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಮಾರ್ಚ್‌ ಒಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವಾಗ ಎಸ್‌ಬಿಐಗೆ ಸೂಚಿಸಿದೆ. ಅಲ್ಲದೆ, ಮಾರ್ಚ್ 13ರ ಒಳಗೆ ಚುನಾವಣಾ ಆಯೋಗ ಈ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶಿಸಿದೆ. ಇದೊಂದು ಮಹತ್ವದ ಆದೇಶ. ಈ ಮೂಲಕ ಯಾವ ಪಕ್ಷಕ್ಕೆ ಯಾರು ಎಷ್ಟು ಹಣ ಕೊಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಲಿದೆ ಎಂದು ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನಿಂದ ಅದಾನಿ, ಅಂಬಾನಿ, ವೇದಾಂತದಂತಹ ದೊಡ್ಡ ದೊಡ್ಡ ಕಂಪನಿಗಳು ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ, ವಿಶೇಷವಾಗಿ ಬಿಜೆಪಿಗೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗಲಿದೆ. ಅದಾನಿ, ಅಂಬಾನಿಯವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳನ್ನು ಮಾರುತ್ತಿದ್ದರು. ಅದರ ದುಡ್ಡು ಎಲ್ಲಿಗೆ ಹೋಗುತ್ತಿತ್ತು ಎಂದು ಇದುವರೆಗೆ ಮಾಹಿತಿ ಹೊರ ಬರುತ್ತಿರಲಿಲ್ಲ. ಉದಾಹರಣೆಗೆ, ರಿಲಾಯನ್ಸ್ ಕಮ್ಯೂನಿಕೇಷನ್ಸ್ ಎಂಬ ಅನಿಲ್ ಅಂಬಾನಿಯವರ ಕಂಪನಿ ಇತ್ತು. ಅದರ ಮೌಲ್ಯ ಅಂದಾಜು 49 ಸಾವಿರ ಕೋಟಿ ರೂಪಾಯಿ ಇತ್ತು. ಆದರೆ, ಅದನ್ನು ಕೇವಲ 425 ಕೋಟಿ ರೂಪಾಯಿಗೆ ಮುಖೇಶ್ ಅಂಬಾನಿ ಖರೀದಿಸಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ, ಉಳಿದ 48 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? ಇಂತಹ ಮಾಹಿತಿಗಳು ಜನರಿಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆ: 

ಚುನಾವಣಾ ಬಾಂಡ್‌ಗಳಿಂದ ಮಾಹಿತಿ ಹಕ್ಕು ಕಾಯ್ದೆಯ ಮೇಲೆ ದೊಡ್ಡ ಪರಿಣಾಮ ಬೀರಿತ್ತು. ಜನರಿಗೆ ರಾಜಕೀಯ ಪಕ್ಷಗಳ ಹಣದ ಕುರಿತು ಮಾಹಿತಿ ಸಿಗುತ್ತಿರಲಿಲ್ಲ. ಒಂದು ಬಾರಿ ಕೇಂದ್ರ ಮಾಹಿತಿ ಹಕ್ಕು ಆಯೋಗ ಚುನಾವಣಾ ಬಾಂಡ್ ಕುರಿತ ಮಾಹಿತಿಯನ್ನುಆರ್‌ಟಿಐ ಮೂಲಕ ನೀಡುವಂತೆ ಸೂಚಿಸಿತ್ತು. ಆದರೆ, ಅದರ ವಿರುದ್ದ ಕೇಂದ್ರ ಸರ್ಕಾರ ನ್ಯಾಯಾಲಯದಿಂದ ತಡೆ ತಂದಿತ್ತು. ಈ ಮೂಲಕ ರಾಜಕೀಯ ಪಕ್ಷಗಳು ಒಂದು ಕಡೆ ದುಡ್ಡು ಮಾಡುತ್ತಿತ್ತು. ಮತ್ತೊಂದೆಡೆ ಜನರಿಗೆ ಮಾಹಿತಿ ನೀಡುತ್ತಿರಲಿಲ್ಲ ಎಂದು ಆದರ್ಶ್‌ ಅಯ್ಯರ್ ತಿಳಿಸಿದ್ದಾರೆ.

ತಿದ್ದುಪಡಿಗಳು ಅಸಂವಿಧಾನಿಕ

2017ರಲ್ಲಿ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಗಿತ್ತು. ಕೇವಲ ಹಣಕಾಸು ಕಾಯ್ದೆ ಮಾತ್ರವಲ್ಲದೆ, ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಜನಪ್ರತಿನಿಧಿಗಳ ಕಾಯ್ದೆ ಎಲ್ಲದಕ್ಕೂ ತಿದ್ದುಪಡಿ ತಂದು ಚುನಾವಣಾ ಬಾಂಡ್ ಜಾರಿಗೊಳಿಸಿದ್ದರು. ಈ ತಿದ್ದುಪಡಿಗೂ ಮೊದಲು ಕಂಪನಿಗಳು ರಾಜಕೀಯ ಪಕ್ಷಗಳಿಗೆ ತಮ್ಮ ಲಾಭದ ಗರಿಷ್ಠ ಶೇ.7ರಷ್ಟು ಮಾತ್ರ ದೇಣಿಗೆ ನೀಡಬಹುದಿತ್ತು. ಅದನ್ನು ತೆಗೆದು ಹಾಕಿದ್ದರು. ಬಿಜೆಪಿಯವರು ತಮ್ಮ ಬಹುಮತ ದುರುಪಯೋಗ ಮಾಡಿಕೊಂಡು ಲಾಭಕ್ಕೆ ಬಳಸುತ್ತಿದ್ದರು. ಪ್ರಜಾಪ್ರಭುತ್ವವನ್ನೇ ತಿರುಚಿದ್ದರು. ಸುಪ್ರೀಂ ಕೋರ್ಟ್‌ ಈ ಎಲ್ಲಾ ತಿದ್ದುಪಡಿಗಳನ್ನು ಅಸಂವಿಧಾನಿಕ ಎಂದು ಹೇಳಿದೆ ಎಂದಿದ್ದಾರೆ.

ಜನರಿಗೆ ಜಾಗೃತಿ ಮೂಡಿಸಬೇಕು:

ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳ ನಡೆಸುತ್ತಿದ್ದ ‘ಕಾನೂನಾತ್ಮಕ ಭ್ರಷ್ಟಾಚಾರ’ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಚುನಾವಣಾ ಬಾಂಡ್‌ನಿಂದ ರಾಜಕೀಯ ಪಕ್ಷಗಳು ಮತ್ತು ಅವರ ಜೊತೆಗಿರುವ ಬಂಡವಾಳ ಶಾಹಿಗಳಿಗೆ ಲಾಭ ಆಗುತ್ತಿದೆ ಎಂದು ಜನರಿಗೆ ತಿಳಿಸಬೇಕು. ಜನರು ಎಚ್ಚೆತ್ತುಕೊಂಡೆ ಮುಂದಿನ ಚುನಾವಣೆಯಲ್ಲಿ ಇದು ಖಂಡಿತಾ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ತೀರ್ಪು ಸ್ವಾಗತಾರ್ಹ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ 

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರು ಮಾತನಾಡಿ, “ಸುಪ್ರೀಂ ಕೋರ್ಟ್‌ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಇದು ಬಹಳ ಸಂತೋಷದ ವಿಷಯ. 2017ರ ಹಣಕಾಸು ಕಾಯ್ದೆಯ ತಿದ್ದುಪಡಿಯೇ ಸರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿ ಪ್ರಕಾರ, ಇದುವರೆಗೆ ಸಂಗ್ರವಾದ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐ ಮತ್ತು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಇದು ಅತ್ಯಂತ ಸ್ವಾಗತಾರ್ಹ” ಆದೇಶ ಎಂದಿದ್ದಾರೆ.

ಭವಿಷ್ಯದಲ್ಲಿ ಸರ್ಕಾರ ಇಂತಹ ದುಷ್ಟ ಆಲೋಚನೆ ಮಾಡದಿರಲಿ : ಖರ್ಗೆ

ಸುಪ್ರೀಂ ತೀರ್ಪನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭವಿಷ್ಯದಲ್ಲಿ ಸರ್ಕಾರವು ಇಂತಹ ದುಷ್ಟ ಆಲೋಚನೆಗಳನ್ನು ಮಾಡುವುದನ್ನು ನಿಲ್ಲಿಸಲಿದೆ ಎಂದು ನಾನು ಭಾವಿಸುತ್ತೇನೆ. ಈ ಯೋಜನೆಯನ್ನು ಪ್ರಾರಂಭಿಸಿದಾಗಲೇ ಕಾಂಗ್ರೆಸ್ ಪಕ್ಷವು ಇದು ಪಾರದರ್ಶಕತೆಯಿಂದ ಕೂಡಿಲ್ಲ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿತ್ತು. ಅಲ್ಲದೆ, 2019ರ ಚುನಾವಣಾ ಪ್ರಣಾಳಿಕೆಯಲ್ಲಿ, ಮೋದಿ ಸರ್ಕಾರದ ಈ ಸಂಶಯಾಸ್ಪದ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು” ಎಂದಿದ್ದಾರೆ.

ತೀರ್ಪು ದೊಡ್ಡ ಪರಿಣಾಮ ಬೀರಲಿದೆ : ಕಪಿಲ್ ಸಿಬಲ್

ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತೀರ್ಪಿನ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಎಲ್ಲಾ ಹಣ ರಾಜಕೀಯ ಪಕ್ಷಗಳು ಪಡೆದಿದೆ. ಅದರಲ್ಲೂ ಬಿಜೆಪಿ ಗರಿಷ್ಠ ಮೊತ್ತವನ್ನು ಪಡೆದಿದೆ ಎಂಬ ಸರಳ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತೀರ್ಪು ಖಷಿ ಕೊಟ್ಟಿದೆ. ಚುನಾವಣಾ ಬಾಂಡ್ ಯೋಜನೆಯ ಸ್ಥಗಿತ ನಿಸ್ಸಂಶಯವಾಗಿಯೂ ದೊಡ್ಡ ಪರಿಣಾಮ ಬೀರಲಿದೆ” ಎಂದಿದ್ದಾರೆ

ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಎಸ್‌ವೈ ಖುರೈಶಿ

ಸುಪ್ರೀಂ ತೀರ್ಪಿನ ಕುರಿತು ಮಾತನಾಡಿದ ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, “ಕಳೆದ 5-7 ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ಅತ್ಯಂತ ಐತಿಹಾಸಿಕ ತೀರ್ಪು ಇದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ. ಕಳೆದ ಹಲವು ವರ್ಷಗಳಿಂದ ನಾವೆಲ್ಲರೂ ಇದರ ಬಗ್ಗೆ ಕಾಳಜಿ ವಹಿಸಿದ್ದೇವೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಪ್ರತಿಯೊಬ್ಬರೂ ಈ ಯೋಜನೆ ವಿರುದ್ದ ಪ್ರತಿಭಟಿಸುತ್ತಿದ್ದರು. ನಾನೇ ಹಲವಾರು ಲೇಖನಗಳನ್ನು ಬರೆದಿದ್ದೇನೆ ಮತ್ತು ಮಾಧ್ಯಮಗಳೊಂದಿಗೆ ಹಲವು ಬಾರಿ ಮಾತನಾಡಿದ್ದೇನೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗೂ ಈ ತೀರ್ಪಿನಲ್ಲಿ ಉತ್ತರ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...