Homeಕರ್ನಾಟಕಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತು ಹೋರಾಟಗಾರರು, ಕಾನೂನು ತಜ್ಞರು ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಆದರ್ಶ್ ಅಯ್ಯರ್, ಇದೊಂದು ಐತಿಹಾಸಿಕ ತೀರ್ಪು. ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಬಹಳ ಕೆಟ್ಟದಾದ ದೇಣಿಗೆ ಪದ್ದತಿ ಬಂದಿತ್ತು. ಅದು ಎಲ್ಲಾ ಭ್ರಷ್ಟಾಚಾರಗಳಿಗೂ ಮಿಗಿಲಾಗಿತ್ತು. ಕಾರ್ಪೋರೇಟ್ ಕಂಪನಿಗಳು ಕಳ್ಳ ದಾರಿಯಲ್ಲಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿತ್ತು. ಆ ವ್ಯವಸ್ಥೆಯನ್ನು ಒಡೆದು ಹಾಕುವ ಮೂಲಕ ಸುಪ್ರೀಂ ಕೋರ್ಟ್‌ ಪ್ರಜಾಪ್ರಭುತ್ವವನ್ನು ಬಲಪಡಿಸಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಸರ್ಕಾರ ಯಾವ ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸಿತ್ತೋ, ಅದೇ ರೀತಿ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುನ್ನಡೆಯುತ್ತಿದೆ. ಅದಕ್ಕೆ ಲಗಾಮು ಹಾಕುವಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ಬಹಳ ಮಹತ್ವದ್ದಾಗಿದೆ. ಸರ್ಕಾರಗಳು ಅನಿಯಂತ್ರಿತ ಅಥವಾ ಸರ್ವಾಧಿಕಾರಿ ಧೋರಣೆ ಅನುಸರಿಸಲು ಬೇಕಾದಷ್ಟು ಹಣ ಬೇಕು. ಈಗಿನ ಕೇಂದ್ರ ಸರ್ಕಾರಕ್ಕೆ ಆ ಹಣ ಚುನಾವಣಾ ಬಾಂಡ್‌ ಮೂಲಕ ಸಿಗುತ್ತಿತ್ತು. ಅಂತಹ ಅಕ್ರಮ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಕಡಿವಾಣ ಹಾಕಿದೆ ಎಂದು ಹೇಳಿದ್ದಾರೆ.

ಬಾಂಡ್ ಮಾಹಿತಿ ನೀಡಲು ಎಸ್‌ಬಿಐ, ಚುನಾವಣಾ ಆಯೋಗಕ್ಕೆ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್ ನೀಡುತ್ತಿತ್ತು. ಹಲವು ಕಂಪನಿಗಳು, ಉದ್ಯಮಿಗಳು ರಾಜಕೀಯ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಕೋಟ್ಯಾಂತರ ರೂಪಾಯಿ ಹಣ ಈಗಾಗಲೇ ನೀಡಿದ್ದಾರೆ. ಯಾರು, ಯಾವಾಗ, ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಮಾರ್ಚ್‌ ಒಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವಾಗ ಎಸ್‌ಬಿಐಗೆ ಸೂಚಿಸಿದೆ. ಅಲ್ಲದೆ, ಮಾರ್ಚ್ 13ರ ಒಳಗೆ ಚುನಾವಣಾ ಆಯೋಗ ಈ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶಿಸಿದೆ. ಇದೊಂದು ಮಹತ್ವದ ಆದೇಶ. ಈ ಮೂಲಕ ಯಾವ ಪಕ್ಷಕ್ಕೆ ಯಾರು ಎಷ್ಟು ಹಣ ಕೊಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಲಿದೆ ಎಂದು ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನಿಂದ ಅದಾನಿ, ಅಂಬಾನಿ, ವೇದಾಂತದಂತಹ ದೊಡ್ಡ ದೊಡ್ಡ ಕಂಪನಿಗಳು ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ, ವಿಶೇಷವಾಗಿ ಬಿಜೆಪಿಗೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗಲಿದೆ. ಅದಾನಿ, ಅಂಬಾನಿಯವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳನ್ನು ಮಾರುತ್ತಿದ್ದರು. ಅದರ ದುಡ್ಡು ಎಲ್ಲಿಗೆ ಹೋಗುತ್ತಿತ್ತು ಎಂದು ಇದುವರೆಗೆ ಮಾಹಿತಿ ಹೊರ ಬರುತ್ತಿರಲಿಲ್ಲ. ಉದಾಹರಣೆಗೆ, ರಿಲಾಯನ್ಸ್ ಕಮ್ಯೂನಿಕೇಷನ್ಸ್ ಎಂಬ ಅನಿಲ್ ಅಂಬಾನಿಯವರ ಕಂಪನಿ ಇತ್ತು. ಅದರ ಮೌಲ್ಯ ಅಂದಾಜು 49 ಸಾವಿರ ಕೋಟಿ ರೂಪಾಯಿ ಇತ್ತು. ಆದರೆ, ಅದನ್ನು ಕೇವಲ 425 ಕೋಟಿ ರೂಪಾಯಿಗೆ ಮುಖೇಶ್ ಅಂಬಾನಿ ಖರೀದಿಸಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ, ಉಳಿದ 48 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? ಇಂತಹ ಮಾಹಿತಿಗಳು ಜನರಿಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆ: 

ಚುನಾವಣಾ ಬಾಂಡ್‌ಗಳಿಂದ ಮಾಹಿತಿ ಹಕ್ಕು ಕಾಯ್ದೆಯ ಮೇಲೆ ದೊಡ್ಡ ಪರಿಣಾಮ ಬೀರಿತ್ತು. ಜನರಿಗೆ ರಾಜಕೀಯ ಪಕ್ಷಗಳ ಹಣದ ಕುರಿತು ಮಾಹಿತಿ ಸಿಗುತ್ತಿರಲಿಲ್ಲ. ಒಂದು ಬಾರಿ ಕೇಂದ್ರ ಮಾಹಿತಿ ಹಕ್ಕು ಆಯೋಗ ಚುನಾವಣಾ ಬಾಂಡ್ ಕುರಿತ ಮಾಹಿತಿಯನ್ನುಆರ್‌ಟಿಐ ಮೂಲಕ ನೀಡುವಂತೆ ಸೂಚಿಸಿತ್ತು. ಆದರೆ, ಅದರ ವಿರುದ್ದ ಕೇಂದ್ರ ಸರ್ಕಾರ ನ್ಯಾಯಾಲಯದಿಂದ ತಡೆ ತಂದಿತ್ತು. ಈ ಮೂಲಕ ರಾಜಕೀಯ ಪಕ್ಷಗಳು ಒಂದು ಕಡೆ ದುಡ್ಡು ಮಾಡುತ್ತಿತ್ತು. ಮತ್ತೊಂದೆಡೆ ಜನರಿಗೆ ಮಾಹಿತಿ ನೀಡುತ್ತಿರಲಿಲ್ಲ ಎಂದು ಆದರ್ಶ್‌ ಅಯ್ಯರ್ ತಿಳಿಸಿದ್ದಾರೆ.

ತಿದ್ದುಪಡಿಗಳು ಅಸಂವಿಧಾನಿಕ

2017ರಲ್ಲಿ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಗಿತ್ತು. ಕೇವಲ ಹಣಕಾಸು ಕಾಯ್ದೆ ಮಾತ್ರವಲ್ಲದೆ, ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಜನಪ್ರತಿನಿಧಿಗಳ ಕಾಯ್ದೆ ಎಲ್ಲದಕ್ಕೂ ತಿದ್ದುಪಡಿ ತಂದು ಚುನಾವಣಾ ಬಾಂಡ್ ಜಾರಿಗೊಳಿಸಿದ್ದರು. ಈ ತಿದ್ದುಪಡಿಗೂ ಮೊದಲು ಕಂಪನಿಗಳು ರಾಜಕೀಯ ಪಕ್ಷಗಳಿಗೆ ತಮ್ಮ ಲಾಭದ ಗರಿಷ್ಠ ಶೇ.7ರಷ್ಟು ಮಾತ್ರ ದೇಣಿಗೆ ನೀಡಬಹುದಿತ್ತು. ಅದನ್ನು ತೆಗೆದು ಹಾಕಿದ್ದರು. ಬಿಜೆಪಿಯವರು ತಮ್ಮ ಬಹುಮತ ದುರುಪಯೋಗ ಮಾಡಿಕೊಂಡು ಲಾಭಕ್ಕೆ ಬಳಸುತ್ತಿದ್ದರು. ಪ್ರಜಾಪ್ರಭುತ್ವವನ್ನೇ ತಿರುಚಿದ್ದರು. ಸುಪ್ರೀಂ ಕೋರ್ಟ್‌ ಈ ಎಲ್ಲಾ ತಿದ್ದುಪಡಿಗಳನ್ನು ಅಸಂವಿಧಾನಿಕ ಎಂದು ಹೇಳಿದೆ ಎಂದಿದ್ದಾರೆ.

ಜನರಿಗೆ ಜಾಗೃತಿ ಮೂಡಿಸಬೇಕು:

ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳ ನಡೆಸುತ್ತಿದ್ದ ‘ಕಾನೂನಾತ್ಮಕ ಭ್ರಷ್ಟಾಚಾರ’ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಚುನಾವಣಾ ಬಾಂಡ್‌ನಿಂದ ರಾಜಕೀಯ ಪಕ್ಷಗಳು ಮತ್ತು ಅವರ ಜೊತೆಗಿರುವ ಬಂಡವಾಳ ಶಾಹಿಗಳಿಗೆ ಲಾಭ ಆಗುತ್ತಿದೆ ಎಂದು ಜನರಿಗೆ ತಿಳಿಸಬೇಕು. ಜನರು ಎಚ್ಚೆತ್ತುಕೊಂಡೆ ಮುಂದಿನ ಚುನಾವಣೆಯಲ್ಲಿ ಇದು ಖಂಡಿತಾ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ತೀರ್ಪು ಸ್ವಾಗತಾರ್ಹ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ 

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರು ಮಾತನಾಡಿ, “ಸುಪ್ರೀಂ ಕೋರ್ಟ್‌ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಇದು ಬಹಳ ಸಂತೋಷದ ವಿಷಯ. 2017ರ ಹಣಕಾಸು ಕಾಯ್ದೆಯ ತಿದ್ದುಪಡಿಯೇ ಸರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿ ಪ್ರಕಾರ, ಇದುವರೆಗೆ ಸಂಗ್ರವಾದ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐ ಮತ್ತು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಇದು ಅತ್ಯಂತ ಸ್ವಾಗತಾರ್ಹ” ಆದೇಶ ಎಂದಿದ್ದಾರೆ.

ಭವಿಷ್ಯದಲ್ಲಿ ಸರ್ಕಾರ ಇಂತಹ ದುಷ್ಟ ಆಲೋಚನೆ ಮಾಡದಿರಲಿ : ಖರ್ಗೆ

ಸುಪ್ರೀಂ ತೀರ್ಪನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭವಿಷ್ಯದಲ್ಲಿ ಸರ್ಕಾರವು ಇಂತಹ ದುಷ್ಟ ಆಲೋಚನೆಗಳನ್ನು ಮಾಡುವುದನ್ನು ನಿಲ್ಲಿಸಲಿದೆ ಎಂದು ನಾನು ಭಾವಿಸುತ್ತೇನೆ. ಈ ಯೋಜನೆಯನ್ನು ಪ್ರಾರಂಭಿಸಿದಾಗಲೇ ಕಾಂಗ್ರೆಸ್ ಪಕ್ಷವು ಇದು ಪಾರದರ್ಶಕತೆಯಿಂದ ಕೂಡಿಲ್ಲ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿತ್ತು. ಅಲ್ಲದೆ, 2019ರ ಚುನಾವಣಾ ಪ್ರಣಾಳಿಕೆಯಲ್ಲಿ, ಮೋದಿ ಸರ್ಕಾರದ ಈ ಸಂಶಯಾಸ್ಪದ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು” ಎಂದಿದ್ದಾರೆ.

ತೀರ್ಪು ದೊಡ್ಡ ಪರಿಣಾಮ ಬೀರಲಿದೆ : ಕಪಿಲ್ ಸಿಬಲ್

ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತೀರ್ಪಿನ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಎಲ್ಲಾ ಹಣ ರಾಜಕೀಯ ಪಕ್ಷಗಳು ಪಡೆದಿದೆ. ಅದರಲ್ಲೂ ಬಿಜೆಪಿ ಗರಿಷ್ಠ ಮೊತ್ತವನ್ನು ಪಡೆದಿದೆ ಎಂಬ ಸರಳ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತೀರ್ಪು ಖಷಿ ಕೊಟ್ಟಿದೆ. ಚುನಾವಣಾ ಬಾಂಡ್ ಯೋಜನೆಯ ಸ್ಥಗಿತ ನಿಸ್ಸಂಶಯವಾಗಿಯೂ ದೊಡ್ಡ ಪರಿಣಾಮ ಬೀರಲಿದೆ” ಎಂದಿದ್ದಾರೆ

ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಎಸ್‌ವೈ ಖುರೈಶಿ

ಸುಪ್ರೀಂ ತೀರ್ಪಿನ ಕುರಿತು ಮಾತನಾಡಿದ ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, “ಕಳೆದ 5-7 ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ಅತ್ಯಂತ ಐತಿಹಾಸಿಕ ತೀರ್ಪು ಇದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ. ಕಳೆದ ಹಲವು ವರ್ಷಗಳಿಂದ ನಾವೆಲ್ಲರೂ ಇದರ ಬಗ್ಗೆ ಕಾಳಜಿ ವಹಿಸಿದ್ದೇವೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಪ್ರತಿಯೊಬ್ಬರೂ ಈ ಯೋಜನೆ ವಿರುದ್ದ ಪ್ರತಿಭಟಿಸುತ್ತಿದ್ದರು. ನಾನೇ ಹಲವಾರು ಲೇಖನಗಳನ್ನು ಬರೆದಿದ್ದೇನೆ ಮತ್ತು ಮಾಧ್ಯಮಗಳೊಂದಿಗೆ ಹಲವು ಬಾರಿ ಮಾತನಾಡಿದ್ದೇನೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗೂ ಈ ತೀರ್ಪಿನಲ್ಲಿ ಉತ್ತರ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...