Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...