Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...