Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...