Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...