Homeಮುಖಪುಟಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

- Advertisement -
- Advertisement -

“ಈತ ದೇವರಲ್ಲ, ಈತ 1918ರಲ್ಲಿಯೇ ಮರಣ ಹೊಂದಿದ್ದಾನೆ. ಈತ ಮುಸ್ಲಿಂ ಆಗಿದ್ದು, ಮುಲ್ಲಾ ಇವನು” ಎಂದು ಹೇಳುತ್ತಾ ದೇವಸ್ಥಾನವೊಂದರಲ್ಲಿನ ಶಿರಡಿ ಸಾಯಿಬಾಬಾರ ಮೂರ್ತಿಯನ್ನು ಹಾರೆ ಮತ್ತು ಸುತ್ತಿಗೆಗಳಿಂದ ಧ್ವಂಸಗೈಯುವ ವಿಡಿಯೋವೊಂದು ಕಳೆದ ಹಲವು ದಿನಗಳಿಂದ ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಶಾಹ್‌ಪುರ ಜಾತ್‌ನಲ್ಲಿ ಪುರಾನ ಶಿವ ಮಂದಿರ್‌ ದೇವಾಲಯದಲ್ಲಿನ ಶಿರಡಿ ಸಾಯಿಬಾಬಾ ಮೂರ್ತಿಯನ್ನು ಮಾರ್ಚ್ 25 ರಂದು ಧ್ವಂಸಗೊಳಿಸಿ ಅದೇ ಸ್ಥಳದಲ್ಲಿ ಗಣಪತಿ ವಿಗ್ರಹ ಸ್ಥಾಪಿಸಲಾಗಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿನ ಭಕ್ತರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಾಹ್‌ಪುರ ಜಾತ್‌ನ ಹಲವಾರು ಭಕ್ತರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಂದೂಗಳ ಆಧ್ಯಾತ್ಮಿಕ ದೇವರಾದ ಶಿರಡಿ ಸಾಯಿಬಾಬಾ ವಿಗ್ರಹವನ್ನು ನಿಕೃಷ್ಟವಾಗಿ ಧ್ವಂಸ ಮಾಡುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲ್ಪಡುತ್ತಿವೆ. ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಪ್ರಚೋದನಾಕಾರಿ ಭಾಷಣಕ್ಕೆ ಕುಖ್ಯಾತಿಯಾದ ಮತ್ತು ದೆಹಲಿ ಗಲಭೆಯ ಪಿತೂರಿಗಾರ ಎಂದು ಆರೋಪಿಸಲ್ಪಟ್ಟಿರುವ ಯತಿ ನರಸಿಂಗಾನಂದರ ಜೊತೆ ಇರುವ ಫೋಟೊಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಲ್ಲದೇ ವಿಗ್ರಹ ಧ್ವಂಸಗೈದವರನ್ನು ಅಭಿನಂದಿಸಿರುವ ಯತಿ ನರಸಿಂಗಾನಂದ್, “ಪಾಖಂಡಿ ಸಾಯಿಯಂತಹ ಜಿಹಾದಿಗಳನ್ನು ದೇವಾಲಯದೊಳಕ್ಕೆ ಬಿಟ್ಟುಕೊಳ್ಳಬಾರದು” ಎಂದು ಹೇಳುತ್ತಿರುವ ವಿಡಿಯೋ ಸಹ ಹೊರಬಂದಿದೆ. ನಂತರ ಸ್ಕ್ರೋಲ್.ಇನ್ ಜೊತೆ ಮಾತನಾಡಿದ ಅವರು, “ಸಾಯಿಬಾಬಾ ಒರ್ವ ಪಿಂಡಾರಿ ಲೂಟೇರಾ, ಆತನ ಹೆಸರು ಚಾಂದ್ ಖಾನ್ ಎಂಬುದಾಗಿತ್ತು. ಆತ ಜಿಹಾದಿ, ಆತನ ವಿಗ್ರಹ ದೇವಾಲಯದೊಳಗೆ ಇಟ್ಟಿರುವವರಿಗೆ ಹುಚ್ಚು ಹಿಡಿದಿದೆ” ಎಂದು ಹೇಳಿದ್ದಾರೆ.

ವಿಗ್ರಹ ಧ್ವಂಸಗೊಳಿಸುವ ನೇತೃತ್ವ ವಹಿಸಿದ್ದ ವ್ಯಕ್ತಿಯನ್ನು ದೇವಾಲಯ ಸಮಿತಿಯ ಸದಸ್ಯ ಪದಮ್ ಪನ್ವಾರ್ ಎಂದು ಸ್ಥಳೀಯರು ಗುರುತಿಸಿದ್ದಾರೆ. ಅವರು “ವಿಗ್ರಹವು ಹಳೆಯದಾಗಿದ್ದರಿಂದ ಅದನ್ನು ತೆಗೆಯಲಾಯಿತು. ಹಳೆಯ ವಿಗ್ರಹಗಳನ್ನು ತೆಗೆಯುವುದು ಹಿಂದೂ ಧರ್ಮದಲ್ಲಿ ಒಂದು ಸಂಪ್ರದಾಯವಾಗಿದೆ. ದೇವಾಲಯವನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಹೊಸ ದೇವಾಲಯ ಸಿದ್ಧವಾದ ನಂತರ, ನಾವು ಸಭೆ ನಡೆಸಿ ಹೊಸ ಸಾಯಿಬಾಬಾ ವಿಗ್ರಹವನ್ನು ಸ್ಥಾಪಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ವಿಡಿಯೋದಲ್ಲಿ ತಮ್ಮ ಅವಾಚ್ಯ ಬೈಗಳಗಳ ಬಗ್ಗೆ ಪ್ರಶ್ನಿಸಿದಾಗ “ನಾನು ಆ ರೀತಿಯ ಏನನ್ನೂ ಹೇಳಲಿಲ್ಲ. ಆ ರೀತಿಯ ಯಾವುದೇ ವಿಡಿಯೋ ಇದ್ದರೆ ಅದು ನಕಲಿ” ಎಂದು ಅವರು ಜಾರಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲವು ಭಕ್ತರು ಮಾರ್ಚ್ 31 ರಂದು ಸಲ್ಲಿಸಿದ ದೂರಿನಲ್ಲಿ “ಕೆಲವು ಜನರು ಬಂದು ಶ್ರೀ ಸಾಯಿಬಾಬಾರವರ ವಿಗ್ರಹವನ್ನು ಮುರಿದು ಹಾಕಿದರು. ಸಾಯಿಬಾಬಾ ಹಿಂದೂ ದೇವರಲ್ಲ, ಅವರು ಮುಸ್ಲಿಮರಿಗೆ ಸೇರಿದವರಾಗಿರುವುದರಿಂದ ವಿಗ್ರಹವನ್ನು ತೆಗೆಯಬೇಕು ಎಂದು ಹೇಳಿದರು. ಇದು ಸಾಯಿಬಾಬಾ ಅವರನ್ನು ನಂಬುವ ಜನರ ಭಾವನೆಗಳಿಗೆ ನೋವುಂಟು ಮಾಡುವ ಕಾರಣ ಈ ಘೋರ ಅಪರಾಧ ನಡೆಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ವಿನಂತಿಸುತ್ತೇವೆ. ಸಾಯಿಬಾಬಾ ವಿಗ್ರಹವನ್ನು ಅದೇ ದೇವಾಲಯದ ಆವರಣದಲ್ಲಿ ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ನಾವು ವಿನಂತಿಸುತ್ತೇವೆ” ಎಂದು ಬರೆಯಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...