Homeಮುಖಪುಟಬಂಗಾಳಿಗಳಿಗೆ ಮೀನು ಬೇಯುಸುತ್ತೀರಾ ಹೇಳಿಕೆಗೆ ಕ್ಷಮೆಯಾಚಿಸಿದ ನಟ, ಬಿಜೆಪಿ ಮುಖಂಡ ಪರೇಶ್ ರಾವಲ್

ಬಂಗಾಳಿಗಳಿಗೆ ಮೀನು ಬೇಯುಸುತ್ತೀರಾ ಹೇಳಿಕೆಗೆ ಕ್ಷಮೆಯಾಚಿಸಿದ ನಟ, ಬಿಜೆಪಿ ಮುಖಂಡ ಪರೇಶ್ ರಾವಲ್

- Advertisement -
- Advertisement -

ಗುಜರಾತ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ‘ನಿಮ್ಮ ಅಕ್ಕಪಕ್ಕದಲ್ಲಿ ಬಾಂಗ್ಲಾದೇಶಿಯವರು ಮತ್ತು ರೋಹಿಂಗ್ಯಗಳು ವಾಸಿಸಿದರೆ ಏನು ಮಾಡುತ್ತೀರಿ? ಕಡಿಮೆ ಬೆಲೆಯ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಬಂಗಾಳಿಗಳಿಗೆ ಮೀನು ಬೇಯಿಸಿಕೊಡುತ್ತೀರಾ’ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ನಟ ಹಾಗೂ ಬಿಜೆಪಿ ಸಂಸದ ಪರೇಶ್ ರಾವಲ್ ಕ್ಷಮೆಯಾಚಿಸಿದ್ದಾರೆ.

ಗುಜರಾತಿನ ವಲ್ಸಾಡ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಸಭೆಯಲ್ಲಿ ಮಾತನಾಡಿದ ಅವರು, “ಗ್ಯಾಸ್ ಸಿಲಿಂಡರ್ ದುಬಾರಿಯಾಗಿದ್ದರೆ ಮತ್ತು ಅದರ ಬೆಲೆ ಇಳಿಯುತ್ತದೆ. ಜನರಿಗೆ ಉದ್ಯೋಗವೂ ದೊರೆಯಲಿದೆ. ಆದರೆ ರೋಹಿಂಗ್ಯ ವಲಸಿಗರು ಮತ್ತು ಬಾಂಗ್ಲಾದೇಶಿಗರು ದೆಹಲಿಯಂತೆ ನಿಮ್ಮ ಸುತ್ತಲು ವಾಸಿಸಲು ಪ್ರಾರಂಭಿಸಿದರೆ ಏನಾಗುತ್ತದೆ? ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ನೀವು ಏನು ಮಾಡುತ್ತೀರಿ? ಮೊದಲು ಬಂಗಾಳಿಗಳಿಗೆ ಮೀನು ಬೇಯುಸುತ್ತೀರಾ?” ಎಂದು ಹೇಳಿದ್ದರು.

ಮುಂದುವರೆದು ಗುಜರಾತಿನ ಜನರು ಹಣದುಬ್ಬರವನ್ನು ಸಹಿಸಿಕೊಳ್ಳುತ್ತಾರೆ. ಆದರೆ ಇಂತಹುಗಳನ್ನು ಸಹಿಸುವುದಿಲ್ಲ. ಆ ವ್ಯಕ್ತಿ ತಮ್ಮ ಬಾಯಿಗೆ ಡೈಪರ್ ಹಾಕಿಕೊಂಡು ಸುಮ್ಮನಿರಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಗುರಿಯಾಗಿಸಿ ಟೀಕಿಸಿದ್ದರು.

ಇದರಿಂದ ಸಿಟ್ಟಿಗೆದ್ದ ಬಂಗಾಳಿಗರು ಪರೇಶ್ ವಿರುದ್ಧ ಕಿಡಿಕಾರಿದ್ದರು. ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರತಿಕ್ರಿಯೆ ನೀಡಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು.

“ಪರೇಶ್ ರಾವಲ್ ಸರ್, ಬಂಗಾಳಿಗಳು ಅವರಿಗೆ ಮೀನು ಬೇಯಿಸಲು ನಿಮ್ಮ ಅಗತ್ಯವಿಲ್ಲ. ನೀವು ಸಹ ಮಹಾರಾಷ್ಟ್ರದಲ್ಲಿ ನಿಮ್ಮ ವೃತ್ತಿಜೀವನವನ್ನು ಆರಂಭಿಸಿದ್ದೀರಿ ಎಂಬುದನ್ನು ನೆನಪಿಡಿ, ಅಲ್ಲಿ ನಾವು ನಿಮಗೆ ಪ್ರೀತಿಯಿಂದ ಧೋಕ್ಲಾ ಮತ್ತು ಫಾಫ್ಡಾವನ್ನು ನೀಡಿದ್ದೇವೆ. ಗುಜರಾತ್‌ನಲ್ಲಿ ಬಿಜೆಪಿಯ ಆದೇಶದ ಮೇರೆಗೆ ನೀವು ಬಂಗಾಳದ ವಿರುದ್ಧ ಮಾಡಿದ ಈ ಹೇಯ ಟೀಕೆಗಳನ್ನು ಹಿಂತೆಗೆದುಕೊಳ್ಳಿ ಮತ್ತು ಕ್ಷಮೆಯಾಚಿಸಿ” ಎಂದು ಒತ್ತಾಯಿಸಿದ್ದರು.

ಟೀಕೆಗಳು ವ್ಯಕ್ತವಾದ ನಂತರ ಪರೇಶ್ ರಾವಲ್ ಕ್ಷಮೆಯಾಚಿಸಿದ್ದಾರೆ. ಇದು ಮೀನಿನ ವಿಷಯವಲ್ಲ. ಅವರು ಸ್ಪಷ್ಟೀಕರಣ ನೀಡಬೇಕೆಂಬ ಟ್ವಿಟರ್ ಬಳಕೆದಾರರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾವಲ್, “ಖಂಡಿತವಾಗಿ ಮೀನಿನ ವಿಚಾರ ಒಂದು ಸಮಸ್ಯೆಯಲ್ಲ. ಗುಜರಾತಿಗಳು ಕೂಡ ಮೀನನ್ನು ಬೇಯಿಸುತ್ತಾರೆ ಮತ್ತು ಸೇವಿಸುತ್ತಾರೆ. ಬಂಗಾಳಿ ಹೇಳಿಕೆಯ ವಿಚಾರದಲ್ಲಿ ನಾನು ಉಲ್ಲೇಖಿಸಿದ್ದು ಅಕ್ರಮ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯರನ್ನು. ಅದರೂ ನಿಮ್ಮ ಭಾವನೆಗಳಿಗೆ ನೋವುಂಟಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...