Homeಕರ್ನಾಟಕನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ ಚೇತನ್ ವಿರುದ್ಧ ದೂರು ದಾಖಲಿಸಿರುವ ಸಚ್ಚಿದಾನಂದ ಮೂರ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

- Advertisement -
- Advertisement -

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದೆ.

’ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿರುತ್ತಾರೆ. ಇದರಿಂದ ಸಮುದಾಯ ಮಾನಸಿಕವಾಗಿ ನೊಂದಿದ್ದು, ರಾಜ್ಯಾದ್ಯಂತ ವಿವಿಧ ಸಂಗ ಸಂಸ್ಥೆಗಳು ನನಗೆ ಮನವಿ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ್​ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಚೇತನ್ ವಿರುದ್ಧ ಬ್ರಾಹ್ಮಣ ನೀಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣರ ಕ್ಷಮೆ ಕೇಳಲು ಚೇತನ್ ಯಾವ ತಪ್ಪು ಮಾಡಿಲ್ಲ ಎಂದಿದ್ದಾರೆ. #IStandWithChetanAhimsa ಎಂಬ ಹ್ಯಾಶ್‌ಟ್ಯಾಗ್ ಹಾಕಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಟ ಚೇತನ್ ಪೋಸ್ಟ್‌ನಲ್ಲಿ ಇದ್ದದ್ದು ಏನು…?

ಜೂನ್ 6 ರಂದು ನಟ ಚೇತನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಪೆರಿಯಾರ್‌ ಅವರ ಹೇಳಿಕೆಗಳನ್ನು ಕೋಟ್ ಮಾಡಿ, ಪೋಸ್ಟ್ ಮಾಡಿದ್ದರು.
” ‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ — ಅಂಬೇಡ್ಕರ್
‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ’- ಪೆರಿಯಾರ್

ಇಬ್ಬರ ಹೇಳಿಕೆಗಳ ಜೊತೆಗೆ #Brahminism #Ambedkar #Periyar ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದರು.

ಇದನ್ನೂ ಓದಿ: ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಹೋರಾಟಗಾರ, ನಟ ಚೇತನ್ ವಿರುದ್ಧ ದೂರು ನೀಡಿರುವುದಕ್ಕೆ ಹಲವು ಮಂದಿ ಅಸಮಾಧಾನ, ಟೀಕೆ ವ್ಯಕ್ತಪಡಿಸಿದ್ದಾರೆ.

’ಚೇತನ್ ಅವರು ತಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧ ಹೊರತು ಬ್ರಾಹ್ಮಣರ ವಿರುದ್ಧ ಅಲ್ಲ ಅಂತ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಅವರೆಲ್ಲೂ ಜನಾಂಗದ ನಿಂದನೆ ಮಾಡಿಲ್ಲ. ಆದರೂ ಅವರೇಕೆ ಕ್ಷಮೆ ಕೇಳಬೇಕು’ ಎಂದು ’ಹೊಸತು’ ಟ್ವಿಟರ್‌ ಖಾತೆ ಬಳಕೆದಾರರು ಪ್ರಶ್ನಿಸಿದ್ದಾರೆ.

“ಬ್ರಾಹ್ಮಣ್ಯತ್ವದಿಂದ ಭಾರತದಲ್ಲಿ ಜಾತಿ, ಅಸಮಾನತೆ, ಮೂಲಭೂತವಾದ ಹುಟ್ಟು ಹಾಕಿ ಜಾತಿ ಕೇಳಿ ಇಂದಿಗೂ ಮೂತ್ರ ಮಾಡುವ ಬ್ರಾಹ್ಮಣರೇ ನಮಗೆ ನೀವು ಕ್ಷಮೆ ಕೇಳಿ! ನಮ್ಮದು ಕ್ಷಮೆ ಕೇಳುವ ವಂಶ ಅಲ್ಲ, ದ್ರಾವಿಡ ವಂಶ, ಬಸವಣ್ಣನ ವಂಶ, ಅಂಬೇಡ್ಕರ್ ವಂಶ!” ಎಂದು ಆಜಾದ್ ಸಮಾಜ್ ಪಾರ್ಟಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಇನ್ನು ನಟನ ವಿರುದ್ಧ ದೂರು ದಾಖಲಿಸಿರುವ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ಲಾಂಛನವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ. ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಮನುವಾದಿಗಳಿಗೆ ಅದಿಕಾರದ ಮದದಿಂದಾಗಿ ಪಿತ್ತ ನೆತ್ತಿಗೇರಿರುವಂತಿದೆ. ವಿಚಾರವಾದಿಗಳ ವಿರುದ್ಧ ದೂರು ಕೊಟ್ಟಾಕ್ಶಣ ವಿಚಾರವಾದ ಅಳಿಯುವುದಿಲ್ಲ ಅಥವಾ ದುರ್ಬಲಗೊಳ್ಳುವುದಿಲ್ಲ, ಬದಲಿಗೆ ಮತ್ತಷ್ಟು ಗಟ್ಟಿಗೊಳ್ಳುತ್ತದೆ.
    ಜೈಬೀಮ್.

  2. ಪರದೇಶದಿಂದ ಬಂದಿರೋ ಬ್ರಾಹ್ಮಣರಿಗೆ ಇಷ್ಟು ಕೊಬ್ಬಿರಬೇಕಾದ್ರೆ ನಾವು ಈ ದೇಶದ ಮೂಲನಿವಾಸಿಗಳು ದ್ರಾವಿಡರು ನಮಗೆಷ್ಟಿರಬೇಡ ಚೇತನ್ ಸರ್ ಜೊತೆ ನಾವಿದೀವಿ ಅದೆಷ್ಟೇ ಬ್ರಾಹ್ಮಣರು ಬಂಧರೂ ನಮ್ಮನ್ನು ಏನು ಕಿತ್ಕೊಳ್ಳಾಕ್ಕಾಗಲ್ಲ. ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....