Homeಕರ್ನಾಟಕನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ ಚೇತನ್ ವಿರುದ್ಧ ದೂರು ದಾಖಲಿಸಿರುವ ಸಚ್ಚಿದಾನಂದ ಮೂರ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

- Advertisement -
- Advertisement -

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದೆ.

’ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿರುತ್ತಾರೆ. ಇದರಿಂದ ಸಮುದಾಯ ಮಾನಸಿಕವಾಗಿ ನೊಂದಿದ್ದು, ರಾಜ್ಯಾದ್ಯಂತ ವಿವಿಧ ಸಂಗ ಸಂಸ್ಥೆಗಳು ನನಗೆ ಮನವಿ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ್​ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಚೇತನ್ ವಿರುದ್ಧ ಬ್ರಾಹ್ಮಣ ನೀಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣರ ಕ್ಷಮೆ ಕೇಳಲು ಚೇತನ್ ಯಾವ ತಪ್ಪು ಮಾಡಿಲ್ಲ ಎಂದಿದ್ದಾರೆ. #IStandWithChetanAhimsa ಎಂಬ ಹ್ಯಾಶ್‌ಟ್ಯಾಗ್ ಹಾಕಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಟ ಚೇತನ್ ಪೋಸ್ಟ್‌ನಲ್ಲಿ ಇದ್ದದ್ದು ಏನು…?

ಜೂನ್ 6 ರಂದು ನಟ ಚೇತನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಪೆರಿಯಾರ್‌ ಅವರ ಹೇಳಿಕೆಗಳನ್ನು ಕೋಟ್ ಮಾಡಿ, ಪೋಸ್ಟ್ ಮಾಡಿದ್ದರು.
” ‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ — ಅಂಬೇಡ್ಕರ್
‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ’- ಪೆರಿಯಾರ್

ಇಬ್ಬರ ಹೇಳಿಕೆಗಳ ಜೊತೆಗೆ #Brahminism #Ambedkar #Periyar ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದರು.

ಇದನ್ನೂ ಓದಿ: ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಹೋರಾಟಗಾರ, ನಟ ಚೇತನ್ ವಿರುದ್ಧ ದೂರು ನೀಡಿರುವುದಕ್ಕೆ ಹಲವು ಮಂದಿ ಅಸಮಾಧಾನ, ಟೀಕೆ ವ್ಯಕ್ತಪಡಿಸಿದ್ದಾರೆ.

’ಚೇತನ್ ಅವರು ತಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧ ಹೊರತು ಬ್ರಾಹ್ಮಣರ ವಿರುದ್ಧ ಅಲ್ಲ ಅಂತ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಅವರೆಲ್ಲೂ ಜನಾಂಗದ ನಿಂದನೆ ಮಾಡಿಲ್ಲ. ಆದರೂ ಅವರೇಕೆ ಕ್ಷಮೆ ಕೇಳಬೇಕು’ ಎಂದು ’ಹೊಸತು’ ಟ್ವಿಟರ್‌ ಖಾತೆ ಬಳಕೆದಾರರು ಪ್ರಶ್ನಿಸಿದ್ದಾರೆ.

“ಬ್ರಾಹ್ಮಣ್ಯತ್ವದಿಂದ ಭಾರತದಲ್ಲಿ ಜಾತಿ, ಅಸಮಾನತೆ, ಮೂಲಭೂತವಾದ ಹುಟ್ಟು ಹಾಕಿ ಜಾತಿ ಕೇಳಿ ಇಂದಿಗೂ ಮೂತ್ರ ಮಾಡುವ ಬ್ರಾಹ್ಮಣರೇ ನಮಗೆ ನೀವು ಕ್ಷಮೆ ಕೇಳಿ! ನಮ್ಮದು ಕ್ಷಮೆ ಕೇಳುವ ವಂಶ ಅಲ್ಲ, ದ್ರಾವಿಡ ವಂಶ, ಬಸವಣ್ಣನ ವಂಶ, ಅಂಬೇಡ್ಕರ್ ವಂಶ!” ಎಂದು ಆಜಾದ್ ಸಮಾಜ್ ಪಾರ್ಟಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಇನ್ನು ನಟನ ವಿರುದ್ಧ ದೂರು ದಾಖಲಿಸಿರುವ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ಲಾಂಛನವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ. ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಮನುವಾದಿಗಳಿಗೆ ಅದಿಕಾರದ ಮದದಿಂದಾಗಿ ಪಿತ್ತ ನೆತ್ತಿಗೇರಿರುವಂತಿದೆ. ವಿಚಾರವಾದಿಗಳ ವಿರುದ್ಧ ದೂರು ಕೊಟ್ಟಾಕ್ಶಣ ವಿಚಾರವಾದ ಅಳಿಯುವುದಿಲ್ಲ ಅಥವಾ ದುರ್ಬಲಗೊಳ್ಳುವುದಿಲ್ಲ, ಬದಲಿಗೆ ಮತ್ತಷ್ಟು ಗಟ್ಟಿಗೊಳ್ಳುತ್ತದೆ.
    ಜೈಬೀಮ್.

  2. ಪರದೇಶದಿಂದ ಬಂದಿರೋ ಬ್ರಾಹ್ಮಣರಿಗೆ ಇಷ್ಟು ಕೊಬ್ಬಿರಬೇಕಾದ್ರೆ ನಾವು ಈ ದೇಶದ ಮೂಲನಿವಾಸಿಗಳು ದ್ರಾವಿಡರು ನಮಗೆಷ್ಟಿರಬೇಡ ಚೇತನ್ ಸರ್ ಜೊತೆ ನಾವಿದೀವಿ ಅದೆಷ್ಟೇ ಬ್ರಾಹ್ಮಣರು ಬಂಧರೂ ನಮ್ಮನ್ನು ಏನು ಕಿತ್ಕೊಳ್ಳಾಕ್ಕಾಗಲ್ಲ. ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...