Homeಕರ್ನಾಟಕನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಸ್ವತಃ ಚೇತನ್ ಮಾಹಿತಿ ನೀಡಿದ್ದಾರೆ.

ಸಾಗರೋತ್ತರ ಭಾರತೀಯ ನಾಗರೀಕ (OCI) ವೀಸಾ ಹೊಂದಿದ್ದ ಚೇತನ್, ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಹಿಂದುತ್ವ ಸಿದ್ಧಾಂತದ ಸುಳ್ಳುಗಳ ಬಗ್ಗೆ ಪ್ರಶ್ನಿಸಿ ಟ್ವಿಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21ರಂದು ಅವರನ್ನು ಬಂಧಿಸಿದ್ದರು. ಈ ಬಗ್ಗೆ ಪ್ರತಿಕಾ ಗೋಷ್ಠಿ ನಡೆಸಿದ ಚೇತನ್, ”23 ವರ್ಷಗಳ ಕಾಲ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ, ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನು ಕಟ್ಟಿಸಿದ್ದೇನೆ. ನಮ್ಮ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ. ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ನನ್ನ ಮೇಲೆ 295A ಕೇಸ್ ಹಾಕಿದರು. ಗನ್ ಮ್ಯಾನ್ ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವಿಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮೂರು ದಿನ ಜೈಲಿಗೆ ಕಳುಹಿಸಿದ್ದರು” ಎಂದು ಹೇಳಿದ್ದಾರೆ.

”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಅಂತಾ ವೀಸಾ ರದ್ದು ಮಾಡಿದ್ದಾರೆ. ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ” ಎಂದು ಚೇತನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

”ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ” ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...