Homeಕರ್ನಾಟಕನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಸ್ವತಃ ಚೇತನ್ ಮಾಹಿತಿ ನೀಡಿದ್ದಾರೆ.

ಸಾಗರೋತ್ತರ ಭಾರತೀಯ ನಾಗರೀಕ (OCI) ವೀಸಾ ಹೊಂದಿದ್ದ ಚೇತನ್, ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಹಿಂದುತ್ವ ಸಿದ್ಧಾಂತದ ಸುಳ್ಳುಗಳ ಬಗ್ಗೆ ಪ್ರಶ್ನಿಸಿ ಟ್ವಿಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21ರಂದು ಅವರನ್ನು ಬಂಧಿಸಿದ್ದರು. ಈ ಬಗ್ಗೆ ಪ್ರತಿಕಾ ಗೋಷ್ಠಿ ನಡೆಸಿದ ಚೇತನ್, ”23 ವರ್ಷಗಳ ಕಾಲ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ, ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನು ಕಟ್ಟಿಸಿದ್ದೇನೆ. ನಮ್ಮ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ. ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ನನ್ನ ಮೇಲೆ 295A ಕೇಸ್ ಹಾಕಿದರು. ಗನ್ ಮ್ಯಾನ್ ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವಿಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮೂರು ದಿನ ಜೈಲಿಗೆ ಕಳುಹಿಸಿದ್ದರು” ಎಂದು ಹೇಳಿದ್ದಾರೆ.

”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಅಂತಾ ವೀಸಾ ರದ್ದು ಮಾಡಿದ್ದಾರೆ. ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ” ಎಂದು ಚೇತನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

”ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ” ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...