Homeಕರ್ನಾಟಕನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಸ್ವತಃ ಚೇತನ್ ಮಾಹಿತಿ ನೀಡಿದ್ದಾರೆ.

ಸಾಗರೋತ್ತರ ಭಾರತೀಯ ನಾಗರೀಕ (OCI) ವೀಸಾ ಹೊಂದಿದ್ದ ಚೇತನ್, ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಹಿಂದುತ್ವ ಸಿದ್ಧಾಂತದ ಸುಳ್ಳುಗಳ ಬಗ್ಗೆ ಪ್ರಶ್ನಿಸಿ ಟ್ವಿಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21ರಂದು ಅವರನ್ನು ಬಂಧಿಸಿದ್ದರು. ಈ ಬಗ್ಗೆ ಪ್ರತಿಕಾ ಗೋಷ್ಠಿ ನಡೆಸಿದ ಚೇತನ್, ”23 ವರ್ಷಗಳ ಕಾಲ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ, ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನು ಕಟ್ಟಿಸಿದ್ದೇನೆ. ನಮ್ಮ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ. ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ನನ್ನ ಮೇಲೆ 295A ಕೇಸ್ ಹಾಕಿದರು. ಗನ್ ಮ್ಯಾನ್ ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವಿಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮೂರು ದಿನ ಜೈಲಿಗೆ ಕಳುಹಿಸಿದ್ದರು” ಎಂದು ಹೇಳಿದ್ದಾರೆ.

”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಅಂತಾ ವೀಸಾ ರದ್ದು ಮಾಡಿದ್ದಾರೆ. ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ” ಎಂದು ಚೇತನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

”ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ” ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...