Homeಕರ್ನಾಟಕನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಸ್ವತಃ ಚೇತನ್ ಮಾಹಿತಿ ನೀಡಿದ್ದಾರೆ.

ಸಾಗರೋತ್ತರ ಭಾರತೀಯ ನಾಗರೀಕ (OCI) ವೀಸಾ ಹೊಂದಿದ್ದ ಚೇತನ್, ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಹಿಂದುತ್ವ ಸಿದ್ಧಾಂತದ ಸುಳ್ಳುಗಳ ಬಗ್ಗೆ ಪ್ರಶ್ನಿಸಿ ಟ್ವಿಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21ರಂದು ಅವರನ್ನು ಬಂಧಿಸಿದ್ದರು. ಈ ಬಗ್ಗೆ ಪ್ರತಿಕಾ ಗೋಷ್ಠಿ ನಡೆಸಿದ ಚೇತನ್, ”23 ವರ್ಷಗಳ ಕಾಲ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ, ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನು ಕಟ್ಟಿಸಿದ್ದೇನೆ. ನಮ್ಮ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ. ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ನನ್ನ ಮೇಲೆ 295A ಕೇಸ್ ಹಾಕಿದರು. ಗನ್ ಮ್ಯಾನ್ ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವಿಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮೂರು ದಿನ ಜೈಲಿಗೆ ಕಳುಹಿಸಿದ್ದರು” ಎಂದು ಹೇಳಿದ್ದಾರೆ.

”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಅಂತಾ ವೀಸಾ ರದ್ದು ಮಾಡಿದ್ದಾರೆ. ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ” ಎಂದು ಚೇತನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

”ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ” ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...