Homeಕರ್ನಾಟಕನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಸ್ವತಃ ಚೇತನ್ ಮಾಹಿತಿ ನೀಡಿದ್ದಾರೆ.

ಸಾಗರೋತ್ತರ ಭಾರತೀಯ ನಾಗರೀಕ (OCI) ವೀಸಾ ಹೊಂದಿದ್ದ ಚೇತನ್, ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಹಿಂದುತ್ವ ಸಿದ್ಧಾಂತದ ಸುಳ್ಳುಗಳ ಬಗ್ಗೆ ಪ್ರಶ್ನಿಸಿ ಟ್ವಿಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21ರಂದು ಅವರನ್ನು ಬಂಧಿಸಿದ್ದರು. ಈ ಬಗ್ಗೆ ಪ್ರತಿಕಾ ಗೋಷ್ಠಿ ನಡೆಸಿದ ಚೇತನ್, ”23 ವರ್ಷಗಳ ಕಾಲ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ, ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನು ಕಟ್ಟಿಸಿದ್ದೇನೆ. ನಮ್ಮ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ. ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ನನ್ನ ಮೇಲೆ 295A ಕೇಸ್ ಹಾಕಿದರು. ಗನ್ ಮ್ಯಾನ್ ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವಿಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮೂರು ದಿನ ಜೈಲಿಗೆ ಕಳುಹಿಸಿದ್ದರು” ಎಂದು ಹೇಳಿದ್ದಾರೆ.

”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಅಂತಾ ವೀಸಾ ರದ್ದು ಮಾಡಿದ್ದಾರೆ. ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ” ಎಂದು ಚೇತನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

”ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ” ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...