Homeಮುಖಪುಟನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

- Advertisement -
- Advertisement -

ಜನಪರ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘ, ‘ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘ ಆರೋಪಿಸಿದ್ದಾರೆ.

ಪೊಲೀಸರು ಮಾಡಿದ ದೊಡ್ಡ ಅನ್ಯಾಯ ಇದಾಗಿದೆ. ಚೇತನ್‌ರವರ ಫೋನ್‌ಅನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ನಾನು ಶೇ‍ಷಾದ್ರಿಪುರಂ ಪೊಲೀಸ್ ಠಾಣೆಯೆದುರು ಬಂದಿದ್ದೇನೆ. ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಬಂದು ನ್ಯಾಯದ ಪರ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಚೇತನ್ ಬಂಧನ ಏಕೆ?

ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಡೆಸುತ್ತಿರುವ ಕುರಿತಾಗಿ ಎರಡು ವರ್ಷದ ಹಿಂದೆ ನಟ ಚೇತನ್‌ರವರು ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿರುದ್ಧ ದೂರು ದಾಖಲಾದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೇತನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’

ಈ ಟ್ವೀಟ್ ಅನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್‌ನ ತೀರ್ಪಿನ ಬಗ್ಗೆ ಬರೆದಿದ್ದೆ.
ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ?” ಎಂದು ಚೇತನ್‌ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೇತನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಬೆಂಬಲಿಗರು, ಸಾಮಾಜಿಕ ಕಾರ್ಯಕರ್ತರು ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದರು ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೇತನ್ ಅವರ ನಿಯಮಬಾಹಿರ ಬಂದನ ಕಂಡನಾರ್ಹ. ವ್ಯವಸ್ಥೆಯ ಉಳುಕುಗಳ ವಿರುದ್ಧ ದನಿ ಎತ್ತುವವರ ನಿಯಮಬಾಹಿರ ಬಂದನ, ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದೆ.

  2. ಚೇತನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಅವರನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಏನೇನು ನೀಡಬೇಕು ಬೇಕು ಅದನ್ನು ನೀಡಿದ್ದಾರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...