Homeಮುಖಪುಟನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

- Advertisement -
- Advertisement -

ಜನಪರ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘ, ‘ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘ ಆರೋಪಿಸಿದ್ದಾರೆ.

ಪೊಲೀಸರು ಮಾಡಿದ ದೊಡ್ಡ ಅನ್ಯಾಯ ಇದಾಗಿದೆ. ಚೇತನ್‌ರವರ ಫೋನ್‌ಅನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ನಾನು ಶೇ‍ಷಾದ್ರಿಪುರಂ ಪೊಲೀಸ್ ಠಾಣೆಯೆದುರು ಬಂದಿದ್ದೇನೆ. ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಬಂದು ನ್ಯಾಯದ ಪರ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಚೇತನ್ ಬಂಧನ ಏಕೆ?

ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಡೆಸುತ್ತಿರುವ ಕುರಿತಾಗಿ ಎರಡು ವರ್ಷದ ಹಿಂದೆ ನಟ ಚೇತನ್‌ರವರು ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿರುದ್ಧ ದೂರು ದಾಖಲಾದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೇತನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’

ಈ ಟ್ವೀಟ್ ಅನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್‌ನ ತೀರ್ಪಿನ ಬಗ್ಗೆ ಬರೆದಿದ್ದೆ.
ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ?” ಎಂದು ಚೇತನ್‌ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೇತನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಬೆಂಬಲಿಗರು, ಸಾಮಾಜಿಕ ಕಾರ್ಯಕರ್ತರು ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದರು ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೇತನ್ ಅವರ ನಿಯಮಬಾಹಿರ ಬಂದನ ಕಂಡನಾರ್ಹ. ವ್ಯವಸ್ಥೆಯ ಉಳುಕುಗಳ ವಿರುದ್ಧ ದನಿ ಎತ್ತುವವರ ನಿಯಮಬಾಹಿರ ಬಂದನ, ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದೆ.

  2. ಚೇತನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಅವರನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಏನೇನು ನೀಡಬೇಕು ಬೇಕು ಅದನ್ನು ನೀಡಿದ್ದಾರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...