Homeಮುಖಪುಟನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

- Advertisement -
- Advertisement -

ಜನಪರ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘ, ‘ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘ ಆರೋಪಿಸಿದ್ದಾರೆ.

ಪೊಲೀಸರು ಮಾಡಿದ ದೊಡ್ಡ ಅನ್ಯಾಯ ಇದಾಗಿದೆ. ಚೇತನ್‌ರವರ ಫೋನ್‌ಅನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ನಾನು ಶೇ‍ಷಾದ್ರಿಪುರಂ ಪೊಲೀಸ್ ಠಾಣೆಯೆದುರು ಬಂದಿದ್ದೇನೆ. ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಬಂದು ನ್ಯಾಯದ ಪರ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಚೇತನ್ ಬಂಧನ ಏಕೆ?

ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಡೆಸುತ್ತಿರುವ ಕುರಿತಾಗಿ ಎರಡು ವರ್ಷದ ಹಿಂದೆ ನಟ ಚೇತನ್‌ರವರು ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿರುದ್ಧ ದೂರು ದಾಖಲಾದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೇತನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’

ಈ ಟ್ವೀಟ್ ಅನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್‌ನ ತೀರ್ಪಿನ ಬಗ್ಗೆ ಬರೆದಿದ್ದೆ.
ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ?” ಎಂದು ಚೇತನ್‌ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೇತನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಬೆಂಬಲಿಗರು, ಸಾಮಾಜಿಕ ಕಾರ್ಯಕರ್ತರು ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದರು ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೇತನ್ ಅವರ ನಿಯಮಬಾಹಿರ ಬಂದನ ಕಂಡನಾರ್ಹ. ವ್ಯವಸ್ಥೆಯ ಉಳುಕುಗಳ ವಿರುದ್ಧ ದನಿ ಎತ್ತುವವರ ನಿಯಮಬಾಹಿರ ಬಂದನ, ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದೆ.

  2. ಚೇತನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಅವರನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಏನೇನು ನೀಡಬೇಕು ಬೇಕು ಅದನ್ನು ನೀಡಿದ್ದಾರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...