Homeಮುಖಪುಟನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

- Advertisement -
- Advertisement -

ಜನಪರ ಸಿನಿಮಾ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘ, ‘ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೇತನ್‌ರವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೇಘ ಆರೋಪಿಸಿದ್ದಾರೆ.

ಪೊಲೀಸರು ಮಾಡಿದ ದೊಡ್ಡ ಅನ್ಯಾಯ ಇದಾಗಿದೆ. ಚೇತನ್‌ರವರ ಫೋನ್‌ಅನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ನಾನು ಶೇ‍ಷಾದ್ರಿಪುರಂ ಪೊಲೀಸ್ ಠಾಣೆಯೆದುರು ಬಂದಿದ್ದೇನೆ. ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಬಂದು ನ್ಯಾಯದ ಪರ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಚೇತನ್ ಬಂಧನ ಏಕೆ?

ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಡೆಸುತ್ತಿರುವ ಕುರಿತಾಗಿ ಎರಡು ವರ್ಷದ ಹಿಂದೆ ನಟ ಚೇತನ್‌ರವರು ಮಾಡಿದ್ದಾರೆ ಎನ್ನಲಾದ ಟ್ವೀಟ್ ವಿರುದ್ಧ ದೂರು ದಾಖಲಾದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೇತನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ – ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಯಿಸುವ ರೀತಿಯಲ್ಲ ಅದು’ ಎಂಬ ಹೇಳಿಕೆಯನ್ನು ನೀಡಿದ್ದರು. 21ನೆಯ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್ ಅವರ ಈ ಸ್ತ್ರೀ ದ್ವೇಷ, ಇದರಲ್ಲಿ ನಾಚಿಕೆಗೇಡಿನ ಸಂಗತಿ’

ಈ ಟ್ವೀಟ್ ಅನ್ನು ನಾನು ಎರಡು ವರ್ಷಗಳ ಹಿಂದೆ ಕರ್ನಾಟಕ ಹೈ ಕೋರ್ಟ್‌ನ ತೀರ್ಪಿನ ಬಗ್ಗೆ ಬರೆದಿದ್ದೆ.
ಜಸ್ಟೀಸ್ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದ ಕುರಿತು ಈ ತರಹದ ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ಕುರಿತು ಬೇಕಾದ ಸ್ಪಷ್ಟತೆಯಿದೆಯೇ?” ಎಂದು ಚೇತನ್‌ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೇತನ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಬೆಂಬಲಿಗರು, ಸಾಮಾಜಿಕ ಕಾರ್ಯಕರ್ತರು ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದರು ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚೇತನ್ ಅವರ ನಿಯಮಬಾಹಿರ ಬಂದನ ಕಂಡನಾರ್ಹ. ವ್ಯವಸ್ಥೆಯ ಉಳುಕುಗಳ ವಿರುದ್ಧ ದನಿ ಎತ್ತುವವರ ನಿಯಮಬಾಹಿರ ಬಂದನ, ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದೆ.

  2. ಚೇತನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಅವರನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಏನೇನು ನೀಡಬೇಕು ಬೇಕು ಅದನ್ನು ನೀಡಿದ್ದಾರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...