Homeಕರ್ನಾಟಕನ್ಯಾಯಾಂಗ ಬಂಧನಕ್ಕೆ ನಟ ಚೇತನ್‌; ಇಂದು ಜಾಮೀನು ಅರ್ಜಿ ವಿಚಾರಣೆ

ನ್ಯಾಯಾಂಗ ಬಂಧನಕ್ಕೆ ನಟ ಚೇತನ್‌; ಇಂದು ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ವಯಲಿಕಾವಲ ಪೋಲಿಸ್ ಠಾಣೆಯಿಂದ ಶೇಷಾದ್ರಿಪುರಂ ಪೊಲೀಸರು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್‌ನಲ್ಲಿ ಇರುವ ನ್ಯಾಯಾಧೀಶರ ಮನೆಗೆ ಮಧ್ಯರಾತ್ರಿ 12.45ರ ವೇಳೆಗೆ ಕರೆದುಕೊಂಡು ಬಂದರು. ನ್ಯಾಯಾಧೀಶರು ವಿಚಾರಣೆ ನಡೆಸಿದರು.

ಹೈಕೋರ್ಟ್ ಹಿರಿಯ ವಕೀಲರಾದ ‌ಎಸ್‌.ಬಾಲನ್ ಅವರು ವಾದ ಮಂಡಿಸಿದರು. ಆದರೆ ನ್ಯಾಯಾಧೀಶರು ಸಮ್ಮತಿ ಸೂಚಿಸಲಿಲ್ಲ. ಚೇತನ್‌ ಅವರನ್ನು ನ್ಯಾಯಾಂಗ ವಿಚಾರಣೆಗೆಂದು 14 ದಿನಗಳ ಮಟ್ಟಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು (ಫೆ.23) ಜಾಮೀನು ಅರ್ಜಿ ವಿಚಾರಣೆಯಾಗಲಿದೆ.

ಕೇಂದ್ರ ಕಾರಾಗೃಹಕ್ಕೆ ಪೊಲೀಸರು ಚೇತನ್‌ ಅವರನ್ನು ತೆಗೆದುಕೊಂಡು ಹೋಗುವ ಮೊದಲು ಚೇತನ್‌ ಅವರ ಪತ್ನಿ ಮೇಘಾ ಅವರು ಕಣ್ಣೀರು ಹಾಕಿದರು. ನಂತರ ಅವರು ಜೈಲಿನಲ್ಲಿ ಇದ್ದು ಓದಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ “annihilation of caste” (ಜಾತಿ ನಿರ್ಮೂಲನೆ) ಕೃತಿಯನ್ನು ಚೇತನ್‌ ಅವರಿಗೆ ನೀಡಿದರು.

ಆ ಸಮಯದಲ್ಲಿ ಚೇತನ್‌‌ ಅವರ ಫೋಟೋವನ್ನು ಅವರ ಪತ್ನಿ ಮೇಘಾ ಅವರು ಕ್ಲಿಕ್ಕಿಸಿದರು. ವಕೀಲರಾದ ಅನಂತ ನಾಯಕ, ಹರಿರಾಮ, ಸುನಿಲ್‌ ಗುನ್ನಾಪುರ ಇತರೆ 8 ಜನ ವಕೀಲರ ತಂಡ ಹಾಜರಿತ್ತು. ಭೀಮ್ ಆರ್ಮಿ ಸಂಘಟನೆಯ ಬ್ರಹ್ಮೇಂದ್ರ, ಶಿವಣ್ಣ, ಆರ್‌ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಹಾಗೂ ಇತರೆ ಇಪ್ಪತ್ತು ಜನರು ಸ್ಥಳದಲ್ಲಿ ಹಾಜರಿದ್ದರು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿರಿ: ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...