Homeಕರ್ನಾಟಕನ್ಯಾಯಾಂಗ ಬಂಧನಕ್ಕೆ ನಟ ಚೇತನ್‌; ಇಂದು ಜಾಮೀನು ಅರ್ಜಿ ವಿಚಾರಣೆ

ನ್ಯಾಯಾಂಗ ಬಂಧನಕ್ಕೆ ನಟ ಚೇತನ್‌; ಇಂದು ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ವಯಲಿಕಾವಲ ಪೋಲಿಸ್ ಠಾಣೆಯಿಂದ ಶೇಷಾದ್ರಿಪುರಂ ಪೊಲೀಸರು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್‌ನಲ್ಲಿ ಇರುವ ನ್ಯಾಯಾಧೀಶರ ಮನೆಗೆ ಮಧ್ಯರಾತ್ರಿ 12.45ರ ವೇಳೆಗೆ ಕರೆದುಕೊಂಡು ಬಂದರು. ನ್ಯಾಯಾಧೀಶರು ವಿಚಾರಣೆ ನಡೆಸಿದರು.

ಹೈಕೋರ್ಟ್ ಹಿರಿಯ ವಕೀಲರಾದ ‌ಎಸ್‌.ಬಾಲನ್ ಅವರು ವಾದ ಮಂಡಿಸಿದರು. ಆದರೆ ನ್ಯಾಯಾಧೀಶರು ಸಮ್ಮತಿ ಸೂಚಿಸಲಿಲ್ಲ. ಚೇತನ್‌ ಅವರನ್ನು ನ್ಯಾಯಾಂಗ ವಿಚಾರಣೆಗೆಂದು 14 ದಿನಗಳ ಮಟ್ಟಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು (ಫೆ.23) ಜಾಮೀನು ಅರ್ಜಿ ವಿಚಾರಣೆಯಾಗಲಿದೆ.

ಕೇಂದ್ರ ಕಾರಾಗೃಹಕ್ಕೆ ಪೊಲೀಸರು ಚೇತನ್‌ ಅವರನ್ನು ತೆಗೆದುಕೊಂಡು ಹೋಗುವ ಮೊದಲು ಚೇತನ್‌ ಅವರ ಪತ್ನಿ ಮೇಘಾ ಅವರು ಕಣ್ಣೀರು ಹಾಕಿದರು. ನಂತರ ಅವರು ಜೈಲಿನಲ್ಲಿ ಇದ್ದು ಓದಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ “annihilation of caste” (ಜಾತಿ ನಿರ್ಮೂಲನೆ) ಕೃತಿಯನ್ನು ಚೇತನ್‌ ಅವರಿಗೆ ನೀಡಿದರು.

ಆ ಸಮಯದಲ್ಲಿ ಚೇತನ್‌‌ ಅವರ ಫೋಟೋವನ್ನು ಅವರ ಪತ್ನಿ ಮೇಘಾ ಅವರು ಕ್ಲಿಕ್ಕಿಸಿದರು. ವಕೀಲರಾದ ಅನಂತ ನಾಯಕ, ಹರಿರಾಮ, ಸುನಿಲ್‌ ಗುನ್ನಾಪುರ ಇತರೆ 8 ಜನ ವಕೀಲರ ತಂಡ ಹಾಜರಿತ್ತು. ಭೀಮ್ ಆರ್ಮಿ ಸಂಘಟನೆಯ ಬ್ರಹ್ಮೇಂದ್ರ, ಶಿವಣ್ಣ, ಆರ್‌ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಹಾಗೂ ಇತರೆ ಇಪ್ಪತ್ತು ಜನರು ಸ್ಥಳದಲ್ಲಿ ಹಾಜರಿದ್ದರು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿರಿ: ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...