Homeಕರ್ನಾಟಕಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

- Advertisement -
- Advertisement -

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ತೆರಳಿದ್ದ ವೇಳೆ, ಕನ್ನಡ ಚಿತ್ರರಂಗದ ಪ್ರತಿನಿಧಿಯಾಗಿ ಸ್ಥಳಕ್ಕೆ ಧಾವಿಸಿದ್ದ ನಟ ಚೇತನ್ ಅಹಿಂಸಾ ಅವರಿಗೆ ಮತೀಯವಾದಿಗಳು ಅಡ್ಡಿಪಡಿಸುವ ಬೆಳವಣಿಗೆ ನಡೆದಿದೆ.

ಹಂಸಲೇಖ ಅವರು ನೀಡಿದ ಹೇಳಿಕೆ ಸಂಬಂಧ ಸೃಷ್ಟಿಯಾಗಿರುವ ವಿವಾದ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ವಿವಾದವನ್ನು ದೊಡ್ಡದು ಮಾಡಿ, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಂಸಲೇಖ ಅವರು ಹಾಜರಾಗಿದ್ದರು. ಕನ್ನಡ ಚಿತ್ರರಂಗದಲ್ಲಿನ ಬೆರಳೆಣಿಯಷ್ಟು ಮಂದಿ ಮಾತ್ರ ಹಂಸಲೇಖರ ಪರ ಹೇಳಿಕೆ ನೀಡಿದ್ದು, ಅದರಲ್ಲಿ ನಟ ಚೇತನ್‌ ಕೂಡ ಒಬ್ಬರಾಗಿದ್ದಾರೆ.

“ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ನಟ ಚೇತನ್‌ ಹೇಳಿದ್ದರು. ಹೀಗಾಗಿ ಚೇತನ್‌ ಅವರು ಸ್ಥಳಕ್ಕೆ ಬರಬಾರದೆಂದು ಚೇತನ್‌ ವಿರೋಧಿಗಳು ಗಲಾಟೆ ಶುರು ಮಾಡಿದರು.

ಸಾಮಾಜಿಕ ನ್ಯಾಯದ ಪರ ಇರುವ ವೇದಿಕೆಗಳಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿರುವ ನಟ ಚೇತನ್‌ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಬ್ರಾಹ್ಮಣ್ಯಕ್ಕೆ ಸಂಬಂಧಿಸಿದಂತೆ ಚೇತನ್‌ ತಾಳಿದ ನಿಲುವುಗಳಿಂದಾಗಿ ಚರ್ಚೆ ಶುರುವಾಗಿತ್ತು. ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಗಳ ಕುರಿತು ಸದಾ ಮಾತನಾಡುವ ನಟ ಚೇತನ್‌, ಪಕ್ಷಾತೀತವಾಗಿ ನಿಲ್ಲುವ ವ್ಯಕ್ತಿ. ಭಿನ್ನ ಅಭಿಪ್ರಾಯಗಳನ್ನು ಗೌರವಿಸುವ ಚೇತನ್‌ ಅವರಿಗೂ ಕೋಮುವಾದಿಗಳಿಗೂ ತಿಕ್ಕಾಟ ಮೊದಲಿನಿಂದಲೂ ನಡೆಯುತ್ತಲೇ ಇದೆ. ಕನ್ನಡ ಚಿತ್ರರಂಗದ ಪ್ರತಿನಿಧಿಯೂ ಆಗಿರುವ ಚೇತನ್‌, ಹಂಸಲೇಖರ ಪರ ದನಿ ಎತ್ತಿದ್ದಾರೆ. ಇಂತಹ ಚೇತನ್‌ ಸ್ಥಳಕ್ಕೆ ಬರಬಾರದೆಂದು ಅಡ್ಡಿಪಡಿಸಲು ಯತ್ನಿಸಲಾಗಿದೆ.

ಅಡ್ಡಿಗಳನ್ನು ದಾಟಿ ಬಸವನಗುಡಿ ಪೊಲೀಸ್ ಠಾಣೆಯ ಬಳಿ ಬಂದು ಮಾತನಾಡಿದ ಚೇತನ್‌, “ಇದು ಮಾಂಸಾಹಾರಿ, ಸಸ್ಯಾಹಾರಿಗಳ ಪ್ರಶ್ನೆ ಅಲ್ಲ. ಸಂವಿಧಾನದ ಅಡಿಪಾಯವಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಹಂಸಲೇಖರ ಮಾತು ಇಷ್ಟವಾಗದವರು, ಕ್ಷಮೆ ಕೇಳಿದರೂ ಹಂಸಲೇಖರ ಮೇಲೆ ದೂರು ನೀಡಲಾಗಿದೆ. ಮಾತನಾಡಿದರೆ ಜೈಲಿಗೆ ಹಾಕಿಸಲು ತಮ್ಮ ಅನುಕೂಲಕರ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇದನ್ನು ಒಪ್ಪಲು ಆಗಲ್ಲ. ನಾಳೆ ನವೆಂಬರ್‌ 26ರಂದು ಹಂಸಲೇಖರ ಪರ ಸೇರುತ್ತಿದ್ದೇವೆ. ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಜಾಥಾ ನಡೆಯಲಿದೆ” ಎಂದು ತಿಳಿಸಿದರು.

“ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ, ಮಹಿಳಾಪರ ಸಂಘಟನೆಗಳೆಲ್ಲ ಸೇರುತ್ತಿವೆ. ಹಂಸಲೇಖರ ಮೇಲೆ ಆಗುತ್ತಿರುವ ದಾಳಿಯನ್ನು ಯಾರೂ ಸಹಿಸಲು ಆಗಲ್ಲ. ಅವರ ಮಾತನ್ನು ಒಪ್ಪಲಿ, ಒಪ್ಪದಿರಲಿ ಅವರ ಮೇಲಿನ ದಾಳಿಯನ್ನು ಸಹಿಸಲು ಆಗಲ್ಲ. ವಾಕ್ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಬನ್ನಿ. ಜೈ ಕರ್ನಾಟಕ, ಜೈ ಬಸವ, ಜೈ ಭೀಮ್‌” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವಾತಂತ್ರ್ಯ ಏನೆಂದು ಕೆಲವರು ಅರಿತಿಲ್ಲ.

    ವಾಕ್ ಸ್ವಾತಂತ್ರ್ಯ ಇದೇ ಇಂದು ಯಾವ ವ್ಯಕ್ತಿಯ ಅಥವಾ ಸಮುದಾಯದ ಗೌರವ ಕ್ಕೆ ದಕ್ಕೆ ಬರುವಹಾಗೆ, ಕೋಮುವಾದಕ್ಕೆ ದಾರಿ ಮಾಡಿಕೊಡುವಂತೆ ಯಾರಿಗೂ ಅಧಿಕಾರ ಕೊಟ್ಟಿಲ್ಲ

    ಎಲ್ಲ ಮಹಾಕೆಲಸ ಮಾಡಿರೋ ಮಹಾ ವ್ಯಕ್ತಿಗಳ ಬಗ್ಗೆ ಎಲ್ಲರೂ ಒಳ್ಳೇದು ಮಾತಾಡಿ, ಅವರು ಮಾಡಿರೋ ಒಳ್ಳೆ ಕಾರ್ಯಗಳನ್ನು ಜನರರಿಗೆ ತಿಳಿಸಬೇಕು. ಶಾಂತಿ ಇಂದ ನಡೆದು ಕೊಳ್ಳ ಬೇಕು.

    ಯಾವ ಬುದ್ಧಿಜೀವಿಗಳು ತಮ್ಮ ತಂದೆ, ತಾಯಿ, ಗುರು ಹಿರಿಯರು, ಆತ್ಮೀಯರ ಮುಂತಾದ ಇಷ್ಟ ವಸ್ತುಗಳ ಬಗ್ಗೆ ಅವಹೇಳನಾಕಾರಿ ಮಾತು ಕೇಳಲು ಇಷ್ಟ ಪಡುವುದಿಲ್ಲ ಮತ್ತೆ ಸಂವಿಧಾನದಲ್ಲಿ ಈ ರೀತಿ ಪುರಾವೆ ಇಲ್ಲದ ಮಾತುಗಳಿಗೆ ವಾಕ್ ಸ್ವಾತಂತ್ರನು ಕೊಟ್ಟಿಲ್ಲ.

    ಶ್ರೀ ಪೇಜಾವರ ಶ್ರೀಗಳು, ಶ್ರೀ ಅಂಬೇಡಿಕರ್ ಅವರು ಹೇಳಿದಂತೆ ಎಲ್ಲರೂ ಸಮಾನರು ಎಂದು ಸಮಾಜಕ್ಕೆ ತೋರುಸಿದ್ದಾರೆ. ದಲಿತರ ಪರ ನಿಂತು ಅವರಿಗೆ ಬಹಳಷ್ಟು ಒಳ್ಳೆ ಕೆಲಸಗಳು ಮಾಡಿದಾರೆ. ಗಂಗಾನದಿ ಸ್ವಚ್ಛತೆ, ರಾಮ ಮಂದಿರ ನಿರ್ಮಾಣಕ್ಕೆ ಅವರಿಗೆ ಭಾರತ ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಸೂಕ್ತ ರೀತಿಯಲ್ಲಿ ನಭಾಯಿಸಿದ್ದಾರೆ. ಯಾರಿಗೂ, ಏನು ಮಾಡದೆ ಭಾರತ ರತ್ನ ಕೊಡುವುದಿಲ್ಲ. ಶ್ರೀಗಳಿಗೆ ಕೊಟ್ಟಿದ್ದಾರೆ…ಅಂತವರ ಬಗ್ಗೆ ಮಾತಾಡಿದರೆ ಖಂಡಿತ ಬೇಸರವಾಗುತ್ತೆ.

    ಚೇತನ್ ಅವರು “ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ.” ಎಂದು ಹೇಳಿದ್ದಾರೆ. ಬಹುತೇಕ ಬೇರೆ ದೇಶದಲ್ಲಿದ್ದ ಅವರಿಗೆ, ಹಿಂದೂಸ್ತಾನದ ಬಗ್ಗೆ ಗೊತ್ತಿಲ್ಲ ಅನ್ನಿಸುತ್ತೆ. ಇಲ್ಲಿ ಎಲ್ಲ ಶಾಂತಿ ಇಂದ ಇರುತ್ತಾರೆ. ನೀವು ಏನಾದ್ರು ಹೇಳಿ ಕೆಣಕಿದರೆನೆ ಕೋಮುವಾದಗಲ್ಲು ಹುಟ್ಟುವುದು. ಶ್ರೀಗಳು ಅದನ್ನೇ ಬೇಡ ಅಂತ ನಮಗೆ ತೋರಿಸಿಕೊಟ್ಟಿದ್ದಾರೆ..ಎಲ್ಲಾರು ಶಾಂತಿ ಕಾಪಾಡಲು ಬದ್ಧವಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...