Homeಕರ್ನಾಟಕಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

- Advertisement -
- Advertisement -

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ತೆರಳಿದ್ದ ವೇಳೆ, ಕನ್ನಡ ಚಿತ್ರರಂಗದ ಪ್ರತಿನಿಧಿಯಾಗಿ ಸ್ಥಳಕ್ಕೆ ಧಾವಿಸಿದ್ದ ನಟ ಚೇತನ್ ಅಹಿಂಸಾ ಅವರಿಗೆ ಮತೀಯವಾದಿಗಳು ಅಡ್ಡಿಪಡಿಸುವ ಬೆಳವಣಿಗೆ ನಡೆದಿದೆ.

ಹಂಸಲೇಖ ಅವರು ನೀಡಿದ ಹೇಳಿಕೆ ಸಂಬಂಧ ಸೃಷ್ಟಿಯಾಗಿರುವ ವಿವಾದ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ವಿವಾದವನ್ನು ದೊಡ್ಡದು ಮಾಡಿ, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಂಸಲೇಖ ಅವರು ಹಾಜರಾಗಿದ್ದರು. ಕನ್ನಡ ಚಿತ್ರರಂಗದಲ್ಲಿನ ಬೆರಳೆಣಿಯಷ್ಟು ಮಂದಿ ಮಾತ್ರ ಹಂಸಲೇಖರ ಪರ ಹೇಳಿಕೆ ನೀಡಿದ್ದು, ಅದರಲ್ಲಿ ನಟ ಚೇತನ್‌ ಕೂಡ ಒಬ್ಬರಾಗಿದ್ದಾರೆ.

“ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ನಟ ಚೇತನ್‌ ಹೇಳಿದ್ದರು. ಹೀಗಾಗಿ ಚೇತನ್‌ ಅವರು ಸ್ಥಳಕ್ಕೆ ಬರಬಾರದೆಂದು ಚೇತನ್‌ ವಿರೋಧಿಗಳು ಗಲಾಟೆ ಶುರು ಮಾಡಿದರು.

ಸಾಮಾಜಿಕ ನ್ಯಾಯದ ಪರ ಇರುವ ವೇದಿಕೆಗಳಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿರುವ ನಟ ಚೇತನ್‌ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಬ್ರಾಹ್ಮಣ್ಯಕ್ಕೆ ಸಂಬಂಧಿಸಿದಂತೆ ಚೇತನ್‌ ತಾಳಿದ ನಿಲುವುಗಳಿಂದಾಗಿ ಚರ್ಚೆ ಶುರುವಾಗಿತ್ತು. ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಗಳ ಕುರಿತು ಸದಾ ಮಾತನಾಡುವ ನಟ ಚೇತನ್‌, ಪಕ್ಷಾತೀತವಾಗಿ ನಿಲ್ಲುವ ವ್ಯಕ್ತಿ. ಭಿನ್ನ ಅಭಿಪ್ರಾಯಗಳನ್ನು ಗೌರವಿಸುವ ಚೇತನ್‌ ಅವರಿಗೂ ಕೋಮುವಾದಿಗಳಿಗೂ ತಿಕ್ಕಾಟ ಮೊದಲಿನಿಂದಲೂ ನಡೆಯುತ್ತಲೇ ಇದೆ. ಕನ್ನಡ ಚಿತ್ರರಂಗದ ಪ್ರತಿನಿಧಿಯೂ ಆಗಿರುವ ಚೇತನ್‌, ಹಂಸಲೇಖರ ಪರ ದನಿ ಎತ್ತಿದ್ದಾರೆ. ಇಂತಹ ಚೇತನ್‌ ಸ್ಥಳಕ್ಕೆ ಬರಬಾರದೆಂದು ಅಡ್ಡಿಪಡಿಸಲು ಯತ್ನಿಸಲಾಗಿದೆ.

ಅಡ್ಡಿಗಳನ್ನು ದಾಟಿ ಬಸವನಗುಡಿ ಪೊಲೀಸ್ ಠಾಣೆಯ ಬಳಿ ಬಂದು ಮಾತನಾಡಿದ ಚೇತನ್‌, “ಇದು ಮಾಂಸಾಹಾರಿ, ಸಸ್ಯಾಹಾರಿಗಳ ಪ್ರಶ್ನೆ ಅಲ್ಲ. ಸಂವಿಧಾನದ ಅಡಿಪಾಯವಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಹಂಸಲೇಖರ ಮಾತು ಇಷ್ಟವಾಗದವರು, ಕ್ಷಮೆ ಕೇಳಿದರೂ ಹಂಸಲೇಖರ ಮೇಲೆ ದೂರು ನೀಡಲಾಗಿದೆ. ಮಾತನಾಡಿದರೆ ಜೈಲಿಗೆ ಹಾಕಿಸಲು ತಮ್ಮ ಅನುಕೂಲಕರ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇದನ್ನು ಒಪ್ಪಲು ಆಗಲ್ಲ. ನಾಳೆ ನವೆಂಬರ್‌ 26ರಂದು ಹಂಸಲೇಖರ ಪರ ಸೇರುತ್ತಿದ್ದೇವೆ. ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಜಾಥಾ ನಡೆಯಲಿದೆ” ಎಂದು ತಿಳಿಸಿದರು.

“ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ, ಮಹಿಳಾಪರ ಸಂಘಟನೆಗಳೆಲ್ಲ ಸೇರುತ್ತಿವೆ. ಹಂಸಲೇಖರ ಮೇಲೆ ಆಗುತ್ತಿರುವ ದಾಳಿಯನ್ನು ಯಾರೂ ಸಹಿಸಲು ಆಗಲ್ಲ. ಅವರ ಮಾತನ್ನು ಒಪ್ಪಲಿ, ಒಪ್ಪದಿರಲಿ ಅವರ ಮೇಲಿನ ದಾಳಿಯನ್ನು ಸಹಿಸಲು ಆಗಲ್ಲ. ವಾಕ್ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಬನ್ನಿ. ಜೈ ಕರ್ನಾಟಕ, ಜೈ ಬಸವ, ಜೈ ಭೀಮ್‌” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವಾತಂತ್ರ್ಯ ಏನೆಂದು ಕೆಲವರು ಅರಿತಿಲ್ಲ.

    ವಾಕ್ ಸ್ವಾತಂತ್ರ್ಯ ಇದೇ ಇಂದು ಯಾವ ವ್ಯಕ್ತಿಯ ಅಥವಾ ಸಮುದಾಯದ ಗೌರವ ಕ್ಕೆ ದಕ್ಕೆ ಬರುವಹಾಗೆ, ಕೋಮುವಾದಕ್ಕೆ ದಾರಿ ಮಾಡಿಕೊಡುವಂತೆ ಯಾರಿಗೂ ಅಧಿಕಾರ ಕೊಟ್ಟಿಲ್ಲ

    ಎಲ್ಲ ಮಹಾಕೆಲಸ ಮಾಡಿರೋ ಮಹಾ ವ್ಯಕ್ತಿಗಳ ಬಗ್ಗೆ ಎಲ್ಲರೂ ಒಳ್ಳೇದು ಮಾತಾಡಿ, ಅವರು ಮಾಡಿರೋ ಒಳ್ಳೆ ಕಾರ್ಯಗಳನ್ನು ಜನರರಿಗೆ ತಿಳಿಸಬೇಕು. ಶಾಂತಿ ಇಂದ ನಡೆದು ಕೊಳ್ಳ ಬೇಕು.

    ಯಾವ ಬುದ್ಧಿಜೀವಿಗಳು ತಮ್ಮ ತಂದೆ, ತಾಯಿ, ಗುರು ಹಿರಿಯರು, ಆತ್ಮೀಯರ ಮುಂತಾದ ಇಷ್ಟ ವಸ್ತುಗಳ ಬಗ್ಗೆ ಅವಹೇಳನಾಕಾರಿ ಮಾತು ಕೇಳಲು ಇಷ್ಟ ಪಡುವುದಿಲ್ಲ ಮತ್ತೆ ಸಂವಿಧಾನದಲ್ಲಿ ಈ ರೀತಿ ಪುರಾವೆ ಇಲ್ಲದ ಮಾತುಗಳಿಗೆ ವಾಕ್ ಸ್ವಾತಂತ್ರನು ಕೊಟ್ಟಿಲ್ಲ.

    ಶ್ರೀ ಪೇಜಾವರ ಶ್ರೀಗಳು, ಶ್ರೀ ಅಂಬೇಡಿಕರ್ ಅವರು ಹೇಳಿದಂತೆ ಎಲ್ಲರೂ ಸಮಾನರು ಎಂದು ಸಮಾಜಕ್ಕೆ ತೋರುಸಿದ್ದಾರೆ. ದಲಿತರ ಪರ ನಿಂತು ಅವರಿಗೆ ಬಹಳಷ್ಟು ಒಳ್ಳೆ ಕೆಲಸಗಳು ಮಾಡಿದಾರೆ. ಗಂಗಾನದಿ ಸ್ವಚ್ಛತೆ, ರಾಮ ಮಂದಿರ ನಿರ್ಮಾಣಕ್ಕೆ ಅವರಿಗೆ ಭಾರತ ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಸೂಕ್ತ ರೀತಿಯಲ್ಲಿ ನಭಾಯಿಸಿದ್ದಾರೆ. ಯಾರಿಗೂ, ಏನು ಮಾಡದೆ ಭಾರತ ರತ್ನ ಕೊಡುವುದಿಲ್ಲ. ಶ್ರೀಗಳಿಗೆ ಕೊಟ್ಟಿದ್ದಾರೆ…ಅಂತವರ ಬಗ್ಗೆ ಮಾತಾಡಿದರೆ ಖಂಡಿತ ಬೇಸರವಾಗುತ್ತೆ.

    ಚೇತನ್ ಅವರು “ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ.” ಎಂದು ಹೇಳಿದ್ದಾರೆ. ಬಹುತೇಕ ಬೇರೆ ದೇಶದಲ್ಲಿದ್ದ ಅವರಿಗೆ, ಹಿಂದೂಸ್ತಾನದ ಬಗ್ಗೆ ಗೊತ್ತಿಲ್ಲ ಅನ್ನಿಸುತ್ತೆ. ಇಲ್ಲಿ ಎಲ್ಲ ಶಾಂತಿ ಇಂದ ಇರುತ್ತಾರೆ. ನೀವು ಏನಾದ್ರು ಹೇಳಿ ಕೆಣಕಿದರೆನೆ ಕೋಮುವಾದಗಲ್ಲು ಹುಟ್ಟುವುದು. ಶ್ರೀಗಳು ಅದನ್ನೇ ಬೇಡ ಅಂತ ನಮಗೆ ತೋರಿಸಿಕೊಟ್ಟಿದ್ದಾರೆ..ಎಲ್ಲಾರು ಶಾಂತಿ ಕಾಪಾಡಲು ಬದ್ಧವಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...