Homeಕರ್ನಾಟಕಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

- Advertisement -
- Advertisement -

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ತೆರಳಿದ್ದ ವೇಳೆ, ಕನ್ನಡ ಚಿತ್ರರಂಗದ ಪ್ರತಿನಿಧಿಯಾಗಿ ಸ್ಥಳಕ್ಕೆ ಧಾವಿಸಿದ್ದ ನಟ ಚೇತನ್ ಅಹಿಂಸಾ ಅವರಿಗೆ ಮತೀಯವಾದಿಗಳು ಅಡ್ಡಿಪಡಿಸುವ ಬೆಳವಣಿಗೆ ನಡೆದಿದೆ.

ಹಂಸಲೇಖ ಅವರು ನೀಡಿದ ಹೇಳಿಕೆ ಸಂಬಂಧ ಸೃಷ್ಟಿಯಾಗಿರುವ ವಿವಾದ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ವಿವಾದವನ್ನು ದೊಡ್ಡದು ಮಾಡಿ, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಂಸಲೇಖ ಅವರು ಹಾಜರಾಗಿದ್ದರು. ಕನ್ನಡ ಚಿತ್ರರಂಗದಲ್ಲಿನ ಬೆರಳೆಣಿಯಷ್ಟು ಮಂದಿ ಮಾತ್ರ ಹಂಸಲೇಖರ ಪರ ಹೇಳಿಕೆ ನೀಡಿದ್ದು, ಅದರಲ್ಲಿ ನಟ ಚೇತನ್‌ ಕೂಡ ಒಬ್ಬರಾಗಿದ್ದಾರೆ.

“ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ನಟ ಚೇತನ್‌ ಹೇಳಿದ್ದರು. ಹೀಗಾಗಿ ಚೇತನ್‌ ಅವರು ಸ್ಥಳಕ್ಕೆ ಬರಬಾರದೆಂದು ಚೇತನ್‌ ವಿರೋಧಿಗಳು ಗಲಾಟೆ ಶುರು ಮಾಡಿದರು.

ಸಾಮಾಜಿಕ ನ್ಯಾಯದ ಪರ ಇರುವ ವೇದಿಕೆಗಳಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿರುವ ನಟ ಚೇತನ್‌ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಬ್ರಾಹ್ಮಣ್ಯಕ್ಕೆ ಸಂಬಂಧಿಸಿದಂತೆ ಚೇತನ್‌ ತಾಳಿದ ನಿಲುವುಗಳಿಂದಾಗಿ ಚರ್ಚೆ ಶುರುವಾಗಿತ್ತು. ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಗಳ ಕುರಿತು ಸದಾ ಮಾತನಾಡುವ ನಟ ಚೇತನ್‌, ಪಕ್ಷಾತೀತವಾಗಿ ನಿಲ್ಲುವ ವ್ಯಕ್ತಿ. ಭಿನ್ನ ಅಭಿಪ್ರಾಯಗಳನ್ನು ಗೌರವಿಸುವ ಚೇತನ್‌ ಅವರಿಗೂ ಕೋಮುವಾದಿಗಳಿಗೂ ತಿಕ್ಕಾಟ ಮೊದಲಿನಿಂದಲೂ ನಡೆಯುತ್ತಲೇ ಇದೆ. ಕನ್ನಡ ಚಿತ್ರರಂಗದ ಪ್ರತಿನಿಧಿಯೂ ಆಗಿರುವ ಚೇತನ್‌, ಹಂಸಲೇಖರ ಪರ ದನಿ ಎತ್ತಿದ್ದಾರೆ. ಇಂತಹ ಚೇತನ್‌ ಸ್ಥಳಕ್ಕೆ ಬರಬಾರದೆಂದು ಅಡ್ಡಿಪಡಿಸಲು ಯತ್ನಿಸಲಾಗಿದೆ.

ಅಡ್ಡಿಗಳನ್ನು ದಾಟಿ ಬಸವನಗುಡಿ ಪೊಲೀಸ್ ಠಾಣೆಯ ಬಳಿ ಬಂದು ಮಾತನಾಡಿದ ಚೇತನ್‌, “ಇದು ಮಾಂಸಾಹಾರಿ, ಸಸ್ಯಾಹಾರಿಗಳ ಪ್ರಶ್ನೆ ಅಲ್ಲ. ಸಂವಿಧಾನದ ಅಡಿಪಾಯವಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಹಂಸಲೇಖರ ಮಾತು ಇಷ್ಟವಾಗದವರು, ಕ್ಷಮೆ ಕೇಳಿದರೂ ಹಂಸಲೇಖರ ಮೇಲೆ ದೂರು ನೀಡಲಾಗಿದೆ. ಮಾತನಾಡಿದರೆ ಜೈಲಿಗೆ ಹಾಕಿಸಲು ತಮ್ಮ ಅನುಕೂಲಕರ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇದನ್ನು ಒಪ್ಪಲು ಆಗಲ್ಲ. ನಾಳೆ ನವೆಂಬರ್‌ 26ರಂದು ಹಂಸಲೇಖರ ಪರ ಸೇರುತ್ತಿದ್ದೇವೆ. ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಜಾಥಾ ನಡೆಯಲಿದೆ” ಎಂದು ತಿಳಿಸಿದರು.

“ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ, ಮಹಿಳಾಪರ ಸಂಘಟನೆಗಳೆಲ್ಲ ಸೇರುತ್ತಿವೆ. ಹಂಸಲೇಖರ ಮೇಲೆ ಆಗುತ್ತಿರುವ ದಾಳಿಯನ್ನು ಯಾರೂ ಸಹಿಸಲು ಆಗಲ್ಲ. ಅವರ ಮಾತನ್ನು ಒಪ್ಪಲಿ, ಒಪ್ಪದಿರಲಿ ಅವರ ಮೇಲಿನ ದಾಳಿಯನ್ನು ಸಹಿಸಲು ಆಗಲ್ಲ. ವಾಕ್ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಬನ್ನಿ. ಜೈ ಕರ್ನಾಟಕ, ಜೈ ಬಸವ, ಜೈ ಭೀಮ್‌” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಕ್ ಸ್ವಾತಂತ್ರ್ಯ ಏನೆಂದು ಕೆಲವರು ಅರಿತಿಲ್ಲ.

    ವಾಕ್ ಸ್ವಾತಂತ್ರ್ಯ ಇದೇ ಇಂದು ಯಾವ ವ್ಯಕ್ತಿಯ ಅಥವಾ ಸಮುದಾಯದ ಗೌರವ ಕ್ಕೆ ದಕ್ಕೆ ಬರುವಹಾಗೆ, ಕೋಮುವಾದಕ್ಕೆ ದಾರಿ ಮಾಡಿಕೊಡುವಂತೆ ಯಾರಿಗೂ ಅಧಿಕಾರ ಕೊಟ್ಟಿಲ್ಲ

    ಎಲ್ಲ ಮಹಾಕೆಲಸ ಮಾಡಿರೋ ಮಹಾ ವ್ಯಕ್ತಿಗಳ ಬಗ್ಗೆ ಎಲ್ಲರೂ ಒಳ್ಳೇದು ಮಾತಾಡಿ, ಅವರು ಮಾಡಿರೋ ಒಳ್ಳೆ ಕಾರ್ಯಗಳನ್ನು ಜನರರಿಗೆ ತಿಳಿಸಬೇಕು. ಶಾಂತಿ ಇಂದ ನಡೆದು ಕೊಳ್ಳ ಬೇಕು.

    ಯಾವ ಬುದ್ಧಿಜೀವಿಗಳು ತಮ್ಮ ತಂದೆ, ತಾಯಿ, ಗುರು ಹಿರಿಯರು, ಆತ್ಮೀಯರ ಮುಂತಾದ ಇಷ್ಟ ವಸ್ತುಗಳ ಬಗ್ಗೆ ಅವಹೇಳನಾಕಾರಿ ಮಾತು ಕೇಳಲು ಇಷ್ಟ ಪಡುವುದಿಲ್ಲ ಮತ್ತೆ ಸಂವಿಧಾನದಲ್ಲಿ ಈ ರೀತಿ ಪುರಾವೆ ಇಲ್ಲದ ಮಾತುಗಳಿಗೆ ವಾಕ್ ಸ್ವಾತಂತ್ರನು ಕೊಟ್ಟಿಲ್ಲ.

    ಶ್ರೀ ಪೇಜಾವರ ಶ್ರೀಗಳು, ಶ್ರೀ ಅಂಬೇಡಿಕರ್ ಅವರು ಹೇಳಿದಂತೆ ಎಲ್ಲರೂ ಸಮಾನರು ಎಂದು ಸಮಾಜಕ್ಕೆ ತೋರುಸಿದ್ದಾರೆ. ದಲಿತರ ಪರ ನಿಂತು ಅವರಿಗೆ ಬಹಳಷ್ಟು ಒಳ್ಳೆ ಕೆಲಸಗಳು ಮಾಡಿದಾರೆ. ಗಂಗಾನದಿ ಸ್ವಚ್ಛತೆ, ರಾಮ ಮಂದಿರ ನಿರ್ಮಾಣಕ್ಕೆ ಅವರಿಗೆ ಭಾರತ ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಸೂಕ್ತ ರೀತಿಯಲ್ಲಿ ನಭಾಯಿಸಿದ್ದಾರೆ. ಯಾರಿಗೂ, ಏನು ಮಾಡದೆ ಭಾರತ ರತ್ನ ಕೊಡುವುದಿಲ್ಲ. ಶ್ರೀಗಳಿಗೆ ಕೊಟ್ಟಿದ್ದಾರೆ…ಅಂತವರ ಬಗ್ಗೆ ಮಾತಾಡಿದರೆ ಖಂಡಿತ ಬೇಸರವಾಗುತ್ತೆ.

    ಚೇತನ್ ಅವರು “ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ.” ಎಂದು ಹೇಳಿದ್ದಾರೆ. ಬಹುತೇಕ ಬೇರೆ ದೇಶದಲ್ಲಿದ್ದ ಅವರಿಗೆ, ಹಿಂದೂಸ್ತಾನದ ಬಗ್ಗೆ ಗೊತ್ತಿಲ್ಲ ಅನ್ನಿಸುತ್ತೆ. ಇಲ್ಲಿ ಎಲ್ಲ ಶಾಂತಿ ಇಂದ ಇರುತ್ತಾರೆ. ನೀವು ಏನಾದ್ರು ಹೇಳಿ ಕೆಣಕಿದರೆನೆ ಕೋಮುವಾದಗಲ್ಲು ಹುಟ್ಟುವುದು. ಶ್ರೀಗಳು ಅದನ್ನೇ ಬೇಡ ಅಂತ ನಮಗೆ ತೋರಿಸಿಕೊಟ್ಟಿದ್ದಾರೆ..ಎಲ್ಲಾರು ಶಾಂತಿ ಕಾಪಾಡಲು ಬದ್ಧವಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...