Homeಕರ್ನಾಟಕಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್‌ಗಳಾಗಿ ಸ್ಮಶಾನ ಕಾರ್ಮಿಕರು ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಕ್ಷಣದ ಅಗತ್ಯತೆಗಳು ಮತ್ತು ದೀರ್ಘಕಾಲಿಕ ಸಮಸ್ಯೆಗಳನ್ನು ಬಗೆ ಹರಿಸಿ ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸಾವುಗಳು ಹೆಚ್ಚಾಗಿರುವ ಈ ಸಂದರ್ಭದಲ್ಲಿ ಹಗಲು- ರಾತ್ರಿ ಚಿತಾಗಾರಗಳು ಮತ್ತು ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾದಿಂದ ಮೃತರಾದವರನ್ನು ಕುಟುಂಬ ಸದಸ್ಯರೇ ದೂರವಿಡುತ್ತಿರುವ ಈ ಸಮಯದಲ್ಲಿ ಚಿತಾಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.

ಸಂಕಷ್ಟದಲ್ಲಿ ಸರ್ಕಾರಕ್ಕೆ ನೆರವಾಗಿರುವ ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಟ ಚೇತನ್ ಬರೆದಿರುವ ಪತ್ರದ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ…

ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು

– ವೈದ್ಯಕೀಯ ವಿಮೆ

– ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ

– ಆದ್ಯತೆಯ ವ್ಯಾಕ್ಸಿನೇಷನ್

– ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆಗೆ ಕೈಗವಸುಗಳು ಮತ್ತು ಮಾಸ್ಕ್‌ಗಳು

– ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು

– ಕೆಲಸದ ಹೊರೆ ಹೆಚ್ಚಿಗೆಯಾದ ಕಾರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು

– 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.

– ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡಬೇಕು.

– ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.

– ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್‌ಗಳಿಗೆ ಸೀಮಿತಗೊಳಿಸಬೇಕು.

– ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.

– ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.

– ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು.

ನಮ್ಮ ಸ್ಮಶಾನ ಕಾರ್ಮಿಕರ ಮತ್ತು ಸಾರ್ವಿಜನಿಕರ ಹಿತದೃಷ್ಟಿಯಿಂದ ನಮ್ಮ ಕರ್ನಾಟಕ ಸರ್ಕಾರ ಈ ನೀತಿಗಳನ್ನು ತಕ್ಷಣವೇ ಜಾರಿಗೆ ತರುತ್ತದೆ ಎಂದು ನಾವು ಭಾವಿಸುತ್ತೇವೆ.

ಎಂದು ನಟ ಚೇತನ್ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...