Homeಕರ್ನಾಟಕಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್‌ಗಳಾಗಿ ಸ್ಮಶಾನ ಕಾರ್ಮಿಕರು ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಕ್ಷಣದ ಅಗತ್ಯತೆಗಳು ಮತ್ತು ದೀರ್ಘಕಾಲಿಕ ಸಮಸ್ಯೆಗಳನ್ನು ಬಗೆ ಹರಿಸಿ ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸಾವುಗಳು ಹೆಚ್ಚಾಗಿರುವ ಈ ಸಂದರ್ಭದಲ್ಲಿ ಹಗಲು- ರಾತ್ರಿ ಚಿತಾಗಾರಗಳು ಮತ್ತು ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾದಿಂದ ಮೃತರಾದವರನ್ನು ಕುಟುಂಬ ಸದಸ್ಯರೇ ದೂರವಿಡುತ್ತಿರುವ ಈ ಸಮಯದಲ್ಲಿ ಚಿತಾಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.

ಸಂಕಷ್ಟದಲ್ಲಿ ಸರ್ಕಾರಕ್ಕೆ ನೆರವಾಗಿರುವ ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಟ ಚೇತನ್ ಬರೆದಿರುವ ಪತ್ರದ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ…

ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು

– ವೈದ್ಯಕೀಯ ವಿಮೆ

– ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ

– ಆದ್ಯತೆಯ ವ್ಯಾಕ್ಸಿನೇಷನ್

– ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆಗೆ ಕೈಗವಸುಗಳು ಮತ್ತು ಮಾಸ್ಕ್‌ಗಳು

– ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು

– ಕೆಲಸದ ಹೊರೆ ಹೆಚ್ಚಿಗೆಯಾದ ಕಾರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು

– 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.

– ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡಬೇಕು.

– ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.

– ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್‌ಗಳಿಗೆ ಸೀಮಿತಗೊಳಿಸಬೇಕು.

– ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.

– ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.

– ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು.

ನಮ್ಮ ಸ್ಮಶಾನ ಕಾರ್ಮಿಕರ ಮತ್ತು ಸಾರ್ವಿಜನಿಕರ ಹಿತದೃಷ್ಟಿಯಿಂದ ನಮ್ಮ ಕರ್ನಾಟಕ ಸರ್ಕಾರ ಈ ನೀತಿಗಳನ್ನು ತಕ್ಷಣವೇ ಜಾರಿಗೆ ತರುತ್ತದೆ ಎಂದು ನಾವು ಭಾವಿಸುತ್ತೇವೆ.

ಎಂದು ನಟ ಚೇತನ್ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...