Homeಕರ್ನಾಟಕಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್‌ಗಳಾಗಿ ಸ್ಮಶಾನ ಕಾರ್ಮಿಕರು ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಕ್ಷಣದ ಅಗತ್ಯತೆಗಳು ಮತ್ತು ದೀರ್ಘಕಾಲಿಕ ಸಮಸ್ಯೆಗಳನ್ನು ಬಗೆ ಹರಿಸಿ ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸಾವುಗಳು ಹೆಚ್ಚಾಗಿರುವ ಈ ಸಂದರ್ಭದಲ್ಲಿ ಹಗಲು- ರಾತ್ರಿ ಚಿತಾಗಾರಗಳು ಮತ್ತು ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾದಿಂದ ಮೃತರಾದವರನ್ನು ಕುಟುಂಬ ಸದಸ್ಯರೇ ದೂರವಿಡುತ್ತಿರುವ ಈ ಸಮಯದಲ್ಲಿ ಚಿತಾಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.

ಸಂಕಷ್ಟದಲ್ಲಿ ಸರ್ಕಾರಕ್ಕೆ ನೆರವಾಗಿರುವ ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಟ ಚೇತನ್ ಬರೆದಿರುವ ಪತ್ರದ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ…

ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು

– ವೈದ್ಯಕೀಯ ವಿಮೆ

– ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ

– ಆದ್ಯತೆಯ ವ್ಯಾಕ್ಸಿನೇಷನ್

– ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆಗೆ ಕೈಗವಸುಗಳು ಮತ್ತು ಮಾಸ್ಕ್‌ಗಳು

– ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು

– ಕೆಲಸದ ಹೊರೆ ಹೆಚ್ಚಿಗೆಯಾದ ಕಾರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು

– 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.

– ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡಬೇಕು.

– ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.

– ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್‌ಗಳಿಗೆ ಸೀಮಿತಗೊಳಿಸಬೇಕು.

– ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.

– ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.

– ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು.

ನಮ್ಮ ಸ್ಮಶಾನ ಕಾರ್ಮಿಕರ ಮತ್ತು ಸಾರ್ವಿಜನಿಕರ ಹಿತದೃಷ್ಟಿಯಿಂದ ನಮ್ಮ ಕರ್ನಾಟಕ ಸರ್ಕಾರ ಈ ನೀತಿಗಳನ್ನು ತಕ್ಷಣವೇ ಜಾರಿಗೆ ತರುತ್ತದೆ ಎಂದು ನಾವು ಭಾವಿಸುತ್ತೇವೆ.

ಎಂದು ನಟ ಚೇತನ್ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...