Homeಕರ್ನಾಟಕನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

ನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಂಹಿಸಾ ಇತ್ತೀಚೆಗೆ ಅವರು ಹಿಂದೂತ್ವದ ಸುಳ್ಳುಗಳ ಬಗ್ಗೆ ಟ್ವೀಟ್ ಮಾಡಿದ್ದರು. ಇದೇ ಕಾರಣಕ್ಕೆ ಅವರನ್ನು ಜೈಲಿಗೂ ಕಳುಹಿಸಲಾಗಿತ್ತು. ಅದರ ಬೆನ್ನಲ್ಲೇ  ಇದೀಗ ಅವರ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ. ಇದು ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಖ್ಯಾತ ನಟ ಕಿಶೋರ್ ಸಹ ಪರೋಕ್ಷವಾಗಿ, ಚೇತನ್ ಹೆಸರನ್ನು ಉಲ್ಲೇಖಿಸದೇ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ನಟ ಕಿಶೋರ್ ಪೋಸ್ಟ್:

ನಟ ಕಿಶೋರ್ ತಮ್ಮ ಇನ್ ಸ್ಟಾಗ್ರಾಮ್‌ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ”ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ತಿಳಿಸಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

ಚೇತನ್ ಟ್ವಿಟ್:

”ಗೃಹ ಸಚಿವಾಲಯವು ನಿರ್ದಿಷ್ಟ ಸಮುದಾಯದ ವಿರುದ್ಧ ದುರಾಗ್ರಹ, ದ್ವೇಷ ಮತ್ತು ದುಷ್ಟತನವನ್ನು ಪ್ರಚಾರ ಮಾಡುತ್ತಿದೆ ಎಂದು ನನ್ನ ಮೇಲೆ ಆರೋಪಿಸಿದೆ. ಇದು ನಿಜವಲ್ಲ. ಅನ್ಯಾಯದ ವ್ಯವಸ್ಥೆಯ ವಿರುದ್ಧ ನಮ್ಮ ಹೋರಾಟ, ಎಂದರೆ ಜನ್ಮಸಿದ್ಧ ಹಕ್ಕು – ಆಧಾರಿತ ಶ್ರೇಣಿಕೃತ ಅಸಮಾನತೆಯನ್ನು ಅಂದರೆ ಬ್ರಾಹ್ಮಣ್ಯವನ್ನು ಕಿತ್ತು ಹಾಕುವುದು – ನಾವು ಯಾವುದೇ ಜಾತಿ ಅಥವಾ ಸಮುದಾಯದ ವಿರುದ್ಧ ಅಲ್ಲ. ಇದನ್ನು ಸಮಾನತೆಯ ಐಕಾನ್‌ಗಳು ನಮಗೆ ಕಲಿಸುತ್ತಿರುವುದು. ಆದರೆ, ಆಡಳಿತದ ಶಕ್ತಿ ರಚನೆಯು ಯಾವಾಗಲೂ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತದೆ” ಎಂದು ಚೇತನ್ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...