Homeಕರ್ನಾಟಕನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

ನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಂಹಿಸಾ ಇತ್ತೀಚೆಗೆ ಅವರು ಹಿಂದೂತ್ವದ ಸುಳ್ಳುಗಳ ಬಗ್ಗೆ ಟ್ವೀಟ್ ಮಾಡಿದ್ದರು. ಇದೇ ಕಾರಣಕ್ಕೆ ಅವರನ್ನು ಜೈಲಿಗೂ ಕಳುಹಿಸಲಾಗಿತ್ತು. ಅದರ ಬೆನ್ನಲ್ಲೇ  ಇದೀಗ ಅವರ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ. ಇದು ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಖ್ಯಾತ ನಟ ಕಿಶೋರ್ ಸಹ ಪರೋಕ್ಷವಾಗಿ, ಚೇತನ್ ಹೆಸರನ್ನು ಉಲ್ಲೇಖಿಸದೇ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ನಟ ಕಿಶೋರ್ ಪೋಸ್ಟ್:

ನಟ ಕಿಶೋರ್ ತಮ್ಮ ಇನ್ ಸ್ಟಾಗ್ರಾಮ್‌ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ”ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ತಿಳಿಸಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

ಚೇತನ್ ಟ್ವಿಟ್:

”ಗೃಹ ಸಚಿವಾಲಯವು ನಿರ್ದಿಷ್ಟ ಸಮುದಾಯದ ವಿರುದ್ಧ ದುರಾಗ್ರಹ, ದ್ವೇಷ ಮತ್ತು ದುಷ್ಟತನವನ್ನು ಪ್ರಚಾರ ಮಾಡುತ್ತಿದೆ ಎಂದು ನನ್ನ ಮೇಲೆ ಆರೋಪಿಸಿದೆ. ಇದು ನಿಜವಲ್ಲ. ಅನ್ಯಾಯದ ವ್ಯವಸ್ಥೆಯ ವಿರುದ್ಧ ನಮ್ಮ ಹೋರಾಟ, ಎಂದರೆ ಜನ್ಮಸಿದ್ಧ ಹಕ್ಕು – ಆಧಾರಿತ ಶ್ರೇಣಿಕೃತ ಅಸಮಾನತೆಯನ್ನು ಅಂದರೆ ಬ್ರಾಹ್ಮಣ್ಯವನ್ನು ಕಿತ್ತು ಹಾಕುವುದು – ನಾವು ಯಾವುದೇ ಜಾತಿ ಅಥವಾ ಸಮುದಾಯದ ವಿರುದ್ಧ ಅಲ್ಲ. ಇದನ್ನು ಸಮಾನತೆಯ ಐಕಾನ್‌ಗಳು ನಮಗೆ ಕಲಿಸುತ್ತಿರುವುದು. ಆದರೆ, ಆಡಳಿತದ ಶಕ್ತಿ ರಚನೆಯು ಯಾವಾಗಲೂ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತದೆ” ಎಂದು ಚೇತನ್ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...