Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...