Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...