Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...