Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...