Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...