Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...