Homeಕರ್ನಾಟಕವಿವಾದಕ್ಕೀಡಾದ ರಿಷಭ್ ಶೆಟ್ಟಿ ಹಾಡಿರುವ 'ಬಡವ ರಾಸ್ಕಲ್' ಗೀತೆ: ನಟ ಡಾಲಿ ಸ್ಪಷ್ಟನೆ

ವಿವಾದಕ್ಕೀಡಾದ ರಿಷಭ್ ಶೆಟ್ಟಿ ಹಾಡಿರುವ ‘ಬಡವ ರಾಸ್ಕಲ್’ ಗೀತೆ: ನಟ ಡಾಲಿ ಸ್ಪಷ್ಟನೆ

- Advertisement -
- Advertisement -

ನಟ ಡಾಲಿ ಧನಂಜಯ್​ ಅಭಿನಯದ ಬಡವ ರಾಸ್ಕಲ್ ಚಿತ್ರದ ಶೀರ್ಷಿಕೆ ಬಳಸಿಕೊಂಡು ರಿಷಭ್​ ಶೆಟ್ಟಿ ‘ಬಡವ ರಾಸ್ಕಲ್​’ ಗೀತೆ ಹಾಡಿದ್ದಾರೆ ಎಂದು ಡಾಲಿ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಟ ಡಾಲಿ ಧನಂಜಯ್​ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿಗೆ ಸಿನಿಮಾದಲ್ಲಿ ಬಳಕೆಯಾಗುವ ಹೆಸರು, ಸಂಭಾಷಣೆಗಳು ಚಲನಚಿತ್ರಗಳ ಶೀರ್ಷಿಕೆಗಳಾಗುತ್ತಿರುವುದು ವಾಡಿಕೆಯಾಗಿದೆ. ಆದರೆ ಇಲ್ಲಿ ಸಿನಿಮಾದ ಶೀರ್ಷಿಕೆಯೇ ಹಾಡಿನ ಸಾಲಾಗುವ ಮೂಲಕ ವಿವಾದಕ್ಕೆ ಕಾರಣವಾಗಿದೆ.

ನಟ ಡಾಲಿ ಧನಂಜಯ್​ ಅಭಿನಯದ ಬಡವ ರಾಸ್ಕಲ್​ ಎಂಬ ಸಿನಿಮಾ ಶೀರ್ಷಿಕೆಯ ಹಾಡು ವೈರಲ್ ಆಗಿರುವುದಕ್ಕೆ ಡಾಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಟ, ನಿರ್ದೇಶಕ ರಿಷಭ್​ ಶೆಟ್ಟಿ ‘ಒಂಭತ್ತು ಸುಳ್ಳು ಕಥೆಗಳು’ ಎಂಬ ಚಿತ್ರದಲ್ಲಿ ‘ಏನೋ ಬಡವ ರಾಸ್ಕಲ್’ ಎಂದು ಹಾಡಿದ್ದಾರೆ. ಈ ಹಾಡನ್ನು ಕೇಳಿದ ಡಾಲಿ ಅಭಿಮಾನಿಗಳು ಡಾಲಿ ಸಿನಿಮಾದ ಗೀತೆ ಇರಬಹುದು ಎಂಬ ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ ಇದು ಸಿನಿಮಾ ಗೀತೆಯಲ್ಲ ಎಂದು ತಿಳಿದು ಬಂದಿದೆ.

ನ.1 ರಂದು ರಾಸ್ಕಲ್​ ಗೀತೆಯನ್ನು ಯೂಟ್ಯೂಬ್​ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಕುರಿತ ಲೇಖನವೂ ಪ್ರಕಟವಾಗಿತ್ತು. ‘ನಮ್ಮ ಚಿತ್ರಕ್ಕೂ ರಿಷಭ್​ ಅದ್ಭುತವಾಗಿ ಹಾಡಿರುವ ಈ ಹಾಡಿಗೂ ಯಾವುದೇ ಸಂಬಂಧವಿಲ್ಲ. ಯಾವ ಸಿನಿಮಾ ಗೀತೆ ಎಂಬುದು ನನಗೆ ಗೊತ್ತಿಲ್ಲ. ಆ ಚಿತ್ರ ತಂಡಕ್ಕೆ ಶುಭವಾಗಲಿ, ನಮ್ಮ ಚಿತ್ರವನ್ನು ಪ್ರಮೋಟ್​ ಮಾಡಿದ್ದಕ್ಕೆ ಧನ್ಯವಾದಗಳು’ ಎಂದು ನಟ ಡಾಲಿ ಧನಂಜಯ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಮುರುಳಿ ಎಂಬುವವರು ಪ್ರತಿಕ್ರಿಯಿಸಿದ್ದು, ‘ಯಾವ ಪದದ ಮೇಲೂ ಯಾರಿಗೂ ಹಕ್ಕಿಲ್ಲ. ಯಾರು ಯಾವ ಪದವನ್ನಾದರೂ ಬಳಸಬಹುದು. ಆದರೆ ಎಲ್ಲದಕ್ಕೂ ವೃತ್ತಿ ಧರ್ಮವಿದೆ. ಡಾಲಿಯ ಬಡವ ರಾಸ್ಕಲ್​ ಸಿನಿಮಾ ಬರುತ್ತಿದೆ ಎಂದು ತಿಳಿದ ನಂತರವೂ ಆ ಸಿನಿಮಾ ಶೀರ್ಷಿಕೆಯ ಪದವನ್ನಿಟ್ಟುಕೊಂಡು ಹಾಡು ಬರೆದು, ಹಾಡಿರುವುದು ಸರಿಯಲ್ಲ. ಕನ್ನಡ ಗೊತ್ತಿಲ್ಲದವರಿಗೆ ಈ ಹಾಡು ಹೇಗೆ ಅರ್ಥವಾಗುತ್ತದೆ’ ಎಂದು ಕಿಡಿಕಾರಿದ್ದಾರೆ.

ಒಂದು ಕಡೆ ಗೀತೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೊಂದೆಡೆ ರಿಷಭ್​, ಧನಂಜಯ್​ ಅವರ ಟ್ವೀಟ್​ ನ್ನು ರೀಟ್ವೀಟ್​ ಮಾಡಿ ಧನ್ಯವಾದ ತಿಳಿಸಿದ್ದಾರೆ. “ಧನ್ಯವಾದಗಳು ಗೆಳೆಯ, ತಮ್ಮ ಅಭಿನಯದ ಬ.ರಾಸ್ಕಲ್ ಚಿತ್ರಕ್ಕೆ ಶುಭವಾಗಲಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...