Homeಕರ್ನಾಟಕಲಿಡ್‌ಕರ್ ಚರ್ಮೋತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟ ಡಾಲಿ ಧನಂಜಯ್

ಲಿಡ್‌ಕರ್ ಚರ್ಮೋತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟ ಡಾಲಿ ಧನಂಜಯ್

- Advertisement -
- Advertisement -

ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ (ಲಿಡ್‌ಕರ್) ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಕನ್ನಡದ ಖ್ಯಾತ ನಟ ಡಾಲಿ ಧನಂಜಯ್ ಆಯ್ಕೆಯಾಗಿದ್ದಾರೆ.

ವಿಧಾನಸೌಧದ ಮುಂಭಾಗ ಇಂದು ನಡೆದ ಡಾ.ಬಿ ಆರ್ ಅಂಬೇಡ್ಕರ್ ಅವರ 67ನೇ ಪರಿನಿಬ್ಬಾಣ ದಿನ ಕಾರ್ಯಕ್ರಮದಲ್ಲಿ ಡಾಲಿ ಧನಂಜಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಲಿಡ್‌ಕರ್ ಉತ್ಪನ್ನಗಳಿಗೆ ರಾಯಭಾರಿಯನ್ನಾಗಿ ಘೋಷಣೆ ಮಾಡಿದರು. ಈ ವೇಳೆ ಧನಂಜಯ ಅವರಿಗೆ ‘ಅಂಬೇಡ್ಕರ್ ಸಮಗ್ರ ಬರಹಗಳು ಮತ್ತು ಭಾಷಣಗಳು’ ಕೃತಿ ನೀಡಿ ಸಿಎಂ ಅಭಿನಂಧಿಸಿಸಿದರು.

ಇದೇ ಮೊದಲ ಭಾರಿಗೆ ಲಿಡ್‌ಕರ್ ತನ್ನ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯನ್ನು ನೇಮಿಸಿದೆ. ನಟ ಧನಂಜಯ್ ಯಾವುದೇ ರೀತಿಯ ಸಂಭಾವನೆ ಪಡೆಯದೆ ಉಚಿತವಾಗಿ ಪ್ರಚಾರ ನಡೆಸಲಿದ್ದಾರೆ. 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬಗಳು ಲಿಡ್‌ಕರ್‌ಗಾಗಿ ಚರ್ಮದ ಚಪ್ಪಲಿ, ಶೂ, ಬೆಲ್ಟ್, ಸೋಫಾ, ಬ್ಯಾಗ್ ಸೇರಿದಂತೆ ವಿವಿಧ ವಸ್ತುಗಳನ್ನು ಕೈನಿಂದ ತಯಾರಿಸಿ ಕೊಡುತ್ತಿದ್ದಾರೆ. ಗುಣಮಟ್ಟ ಹಾಗೂ ಬಾಳಿಕೆ ಕಾರಣಕ್ಕಾಗಿ ಈಗಾಗಲೇ ಲಿಡ್‌ಕರ್ ಉತ್ಪನ್ನಗಳು ಹೆಸರುವಾಸಿಯಾಗಿವೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಮುಂದಾಗಿರುವ ಸಂಸ್ಥೆಯು, ಕನ್ನಡದ ಪ್ರಸಿದ್ಧ ನಟ ಧನಂಜಯ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಟ ಧನಂಜಯ್, ‘ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ ಲಿಡ್‌ಕರ್ ಸಂಸ್ಥೆಯ ಪ್ರಚಾರ ರಾಯಭಾರಿಯಾಗಲು ತುಂಬ ಹೆಮ್ಮೆಯಿದೆ. ಈ ತರಹದ ಒಳ್ಳೆ ಕೆಲಸಕ್ಕೆ ನನ್ನನ್ನು ಭಾಗಿಯಾಗಿ ಮಾಡಿಕೊಂಡ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.

ರಾಯಭಾರಿಯಾಗಿ ಧನಂಜಯ್ ನೇಮಕದ ಕುರಿತು ಮಾತನಾಡಿರುವ ಲಿಡ್‌ಕರ್ ಎಂಡಿ ಕೆ.ಎಂ.ಎಸ್ ವಸುಂಧರಾ, ‘ನಮ್ಮ ಸಂಸ್ಥೆಯ ಉತ್ಪನ್ನಗಳಿಗೆ ಧನಂಜಯ್ ರಾಯಭಾರಿಯಾಗಿರುವುದು ತುಂಬಾ ಖುಷಿಯಾಗಿದೆ. ಅವರು ಸ್ಯಾಂಡಲ್‌ವುಡ್‌ನ ಪ್ರಮುಖ ನಟ, ಎಲ್ಲ ವರ್ಗದ ಜನರಿಗೆ ತಲುಪುವ ಕಲಾವಿದ. ಆದ್ದರಿಂದ, ಅವರನ್ನ ಆಯ್ಕೆ ಮಾಡಲಾಗಿದ್ದು, ಸಚಿವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಆದಷ್ಟು ಬೇಗ ಸಂಸ್ಥೆಯ ಉತ್ಪನ್ನಗಳ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ; ‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...