HomeಮುಖಪುಟIrrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ

Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ

- Advertisement -
- Advertisement -

ಪ್ರಸಿದ್ದ ಹಿಂದಿ ನಟ ಇರ್ಫಾನ್ ಖಾನ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊಲೊನ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಮುಂಬೈಯ ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟನಿಗೆ ಮಾರ್ಚ್ 2018 ರಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ ಇರುವುದು ಪತ್ತೆಯಾಯಿತ್ತು.

ನಟನ ಸಾವಿಗೆ ಚಿತ್ರರಂಗ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ನಿರ್ದೇಶಕ ಶೂಜಿತ್ ಸರ್ಕಾರ್‌ “ನನ್ನ ಪ್ರೀತಿಯ ಸ್ನೇಹಿತ, ನೀನು ಹೋರಾಡಿದೆ, ಹೋರಾಡಿದೆ ಮತ್ತು ಹೋರಾಡಿದೆ, ನಿನ್ನ ಮೇಲೆ ನನಗೆ ಹೆಮ್ಮೆಯಿದೆ. ಮತ್ತೆ ಭೇಟಿಯಾಗೋಣ, ಓಂ ಶಾಂತಿ, ಸೆಲ್ಯೂಟ್ ಇರ್ಫಾನ್ ಖಾನ್” ಎಂದು ಟ್ವೀಟ್ ಮಾಡಿದ್ದಾರೆ.

ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರು ಇರ್ಫಾನ್ ಸಾವಿಗೆ ಕಂಬನಿ ಮಿಡಿದಿದ್ದಾರೆ. ಪ್ರಸನ್ನ ಅವರ ನೇರ ಶಿಷ್ಯರಾಗಿದ್ದ ಇರ್ಫಾನ್ ಅವರೊಂದಿಗೆ ದೀರ್ಘಕಾಲದ ಸ್ನೇಹ ಒಡನಾಟ ಹೊಂದಿದ್ದರು. ಮೈಸೂರಿನ ಬದನವಾಳುವಿನಲ್ಲಿ ಪ್ರಸನ್ನ ಕೈಗೊಂಡಿದ್ದ ಸತ್ಯಾಗ್ರಹಕ್ಕೆ ಬೆಂಬಲಿಸಿ ಸತ್ಯಾಗ್ರಹದಲ್ಲಿ ಇರ್ಫಾನ್‌ ಪಾಲ್ಗೊಂಡಿದ್ದರು.

My student, friend, Gram Seva Sangh important activist, Actor Irrfan Khan's health is deteriorated seriously. We are…

Posted by Prasanna Heggodu Vols Handle on Tuesday, April 28, 2020

54 ವರ್ಷದ ನಟ, ಪತ್ನಿ ಸುತಪಾ ಸಿಕ್ದಾರ್ ಹಾಗೂ ಪುತ್ರರಾದ ಬಾಬಿಲ್ ಮತ್ತು ಅಯಾನ್ ಖಾನ್ ಮತ್ತು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇರ್ಫಾನ್ ಅವರ ತಾಯಿ ಸಯೀದಾ ಬೇಗಂ ಅವರು ತಮ್ಮ 95 ನೇ ವಯಸ್ಸಿನಲ್ಲಿ ಜೈಪುರದಲ್ಲಿ ಶನಿವಾರ ಬೆಳಿಗ್ಗೆ ನಿಧನರಾಗಿದ್ದರು.

ಇರ್ಫಾನ್ ಖಾನ್ ಕೊನೆಯ ಬಾರಿಗೆ “ಆಂಗ್ರೆಜಿ ಮೀಡಿಯಂ” ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದು ಭಾರತದಲ್ಲಿ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಬಿಡುಗಡೆಯಾಗಿತ್ತು. ಆನಾರೋಗ್ಯದಿಂದಾಗಿ ನಟ ಚಿತ್ರದ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಚಿತ್ರದ ಟ್ರೈಲರ್ ಬಿಡುಗಡೆಯ ಸಂದರ್ಭದಲ್ಲಿ ವೀಡಿಯೊ ಸಂದೇಶದ ಮೂಲಕ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

 

ಇರ್ಫಾನ್ ನಟಿಸಿದ ಪ್ರಮುಖ ಚಿತ್ರಗಳು.

  • ಸಲಾಂ ಬಾಂಬೆ
  • ಮಕ್ಬೂಲ್
  • ಲೈಫ್ ಇನ್ ಎ ಮೆಟ್ರೋ
  • ದಿ ನೇಮ್ ಸೇಕ್
  • ಮುಂಬೈ ಮೇರಿ ಜಾನ್
  • ಸ್ಲಂ ಡಾಗ್ ಮಿಲೇನನಿಯರ್
  • ಬಿಲ್ಲು
  • ಪಾನ್ ಸಿಂಗ್ ತೋಮರ್
  • ದಿ ಅಮೇಜಿಂಗ್ ಸ್ಪೈಡರ್ ಮ್ಯಾನ್
  • ಲೈಫ್ ಆಫ್ ಪೈ
  • ಲಂಚ್ ಬಾಕ್ಸ್
  • ಪೀಕು
  • ಜುರಾಸಿಕ್ ವಲ್ಡ್
  • ಕಾರ್ವಾ
  • ಮದಾರಿ
  • ಹಿಂದಿ ಮೀಡಿಯಂ
  • ಅಂಗ್ರೇಜಿ ಮೀಡಿಯಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇರ್ಫಾನ್‌ ಖಾನ್‌ ರ ಇಂಗ್ಲೀಷ್‌ ಚಿತ್ರ ವಾರಿಯರ್‌, ಅದ್ಭುತ ಸಿನೆಮಾ. ಈ ಸಿನೆಮಾದಲ್ಲಿ ಅವರ ಅಭಿನಯ ತುಂಬಾ ಚೆನ್ನಾಗಿದೆ. ಅವರ ಅಭಿಮಾನಿಗಳು ಈ ಸಿನೆಮಾ ನೋಡಬಹುದು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...