HomeಮುಖಪುಟIrrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ

Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ

- Advertisement -
- Advertisement -

ಪ್ರಸಿದ್ದ ಹಿಂದಿ ನಟ ಇರ್ಫಾನ್ ಖಾನ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊಲೊನ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಮುಂಬೈಯ ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟನಿಗೆ ಮಾರ್ಚ್ 2018 ರಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ ಇರುವುದು ಪತ್ತೆಯಾಯಿತ್ತು.

ನಟನ ಸಾವಿಗೆ ಚಿತ್ರರಂಗ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ನಿರ್ದೇಶಕ ಶೂಜಿತ್ ಸರ್ಕಾರ್‌ “ನನ್ನ ಪ್ರೀತಿಯ ಸ್ನೇಹಿತ, ನೀನು ಹೋರಾಡಿದೆ, ಹೋರಾಡಿದೆ ಮತ್ತು ಹೋರಾಡಿದೆ, ನಿನ್ನ ಮೇಲೆ ನನಗೆ ಹೆಮ್ಮೆಯಿದೆ. ಮತ್ತೆ ಭೇಟಿಯಾಗೋಣ, ಓಂ ಶಾಂತಿ, ಸೆಲ್ಯೂಟ್ ಇರ್ಫಾನ್ ಖಾನ್” ಎಂದು ಟ್ವೀಟ್ ಮಾಡಿದ್ದಾರೆ.

ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರು ಇರ್ಫಾನ್ ಸಾವಿಗೆ ಕಂಬನಿ ಮಿಡಿದಿದ್ದಾರೆ. ಪ್ರಸನ್ನ ಅವರ ನೇರ ಶಿಷ್ಯರಾಗಿದ್ದ ಇರ್ಫಾನ್ ಅವರೊಂದಿಗೆ ದೀರ್ಘಕಾಲದ ಸ್ನೇಹ ಒಡನಾಟ ಹೊಂದಿದ್ದರು. ಮೈಸೂರಿನ ಬದನವಾಳುವಿನಲ್ಲಿ ಪ್ರಸನ್ನ ಕೈಗೊಂಡಿದ್ದ ಸತ್ಯಾಗ್ರಹಕ್ಕೆ ಬೆಂಬಲಿಸಿ ಸತ್ಯಾಗ್ರಹದಲ್ಲಿ ಇರ್ಫಾನ್‌ ಪಾಲ್ಗೊಂಡಿದ್ದರು.

My student, friend, Gram Seva Sangh important activist, Actor Irrfan Khan's health is deteriorated seriously. We are…

Posted by Prasanna Heggodu Vols Handle on Tuesday, April 28, 2020

54 ವರ್ಷದ ನಟ, ಪತ್ನಿ ಸುತಪಾ ಸಿಕ್ದಾರ್ ಹಾಗೂ ಪುತ್ರರಾದ ಬಾಬಿಲ್ ಮತ್ತು ಅಯಾನ್ ಖಾನ್ ಮತ್ತು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇರ್ಫಾನ್ ಅವರ ತಾಯಿ ಸಯೀದಾ ಬೇಗಂ ಅವರು ತಮ್ಮ 95 ನೇ ವಯಸ್ಸಿನಲ್ಲಿ ಜೈಪುರದಲ್ಲಿ ಶನಿವಾರ ಬೆಳಿಗ್ಗೆ ನಿಧನರಾಗಿದ್ದರು.

ಇರ್ಫಾನ್ ಖಾನ್ ಕೊನೆಯ ಬಾರಿಗೆ “ಆಂಗ್ರೆಜಿ ಮೀಡಿಯಂ” ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದು ಭಾರತದಲ್ಲಿ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಬಿಡುಗಡೆಯಾಗಿತ್ತು. ಆನಾರೋಗ್ಯದಿಂದಾಗಿ ನಟ ಚಿತ್ರದ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಚಿತ್ರದ ಟ್ರೈಲರ್ ಬಿಡುಗಡೆಯ ಸಂದರ್ಭದಲ್ಲಿ ವೀಡಿಯೊ ಸಂದೇಶದ ಮೂಲಕ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

 

ಇರ್ಫಾನ್ ನಟಿಸಿದ ಪ್ರಮುಖ ಚಿತ್ರಗಳು.

  • ಸಲಾಂ ಬಾಂಬೆ
  • ಮಕ್ಬೂಲ್
  • ಲೈಫ್ ಇನ್ ಎ ಮೆಟ್ರೋ
  • ದಿ ನೇಮ್ ಸೇಕ್
  • ಮುಂಬೈ ಮೇರಿ ಜಾನ್
  • ಸ್ಲಂ ಡಾಗ್ ಮಿಲೇನನಿಯರ್
  • ಬಿಲ್ಲು
  • ಪಾನ್ ಸಿಂಗ್ ತೋಮರ್
  • ದಿ ಅಮೇಜಿಂಗ್ ಸ್ಪೈಡರ್ ಮ್ಯಾನ್
  • ಲೈಫ್ ಆಫ್ ಪೈ
  • ಲಂಚ್ ಬಾಕ್ಸ್
  • ಪೀಕು
  • ಜುರಾಸಿಕ್ ವಲ್ಡ್
  • ಕಾರ್ವಾ
  • ಮದಾರಿ
  • ಹಿಂದಿ ಮೀಡಿಯಂ
  • ಅಂಗ್ರೇಜಿ ಮೀಡಿಯಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇರ್ಫಾನ್‌ ಖಾನ್‌ ರ ಇಂಗ್ಲೀಷ್‌ ಚಿತ್ರ ವಾರಿಯರ್‌, ಅದ್ಭುತ ಸಿನೆಮಾ. ಈ ಸಿನೆಮಾದಲ್ಲಿ ಅವರ ಅಭಿನಯ ತುಂಬಾ ಚೆನ್ನಾಗಿದೆ. ಅವರ ಅಭಿಮಾನಿಗಳು ಈ ಸಿನೆಮಾ ನೋಡಬಹುದು.

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...