Homeಮುಖಪುಟ5 ಜಿ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ನಟಿ ಜೂಹಿ ಚಾವ್ಲಾ ಅರ್ಜಿ

5 ಜಿ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ನಟಿ ಜೂಹಿ ಚಾವ್ಲಾ ಅರ್ಜಿ

- Advertisement -
- Advertisement -

ಭಾರತದಲ್ಲಿ 5 ಜಿ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ನಟಿ ಜೂಹಿ ಚಾವ್ಲಾ ಸೋಮವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ನಾಗರಿಕರು, ಸಸ್ಯ ಮತ್ತು ಪ್ರಾಣಿಗಳ ಮೇಲೆ ವಿಕಿರಣ ಬೀರುವ ಪರಿಣಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿದ್ದಾರೆ. ಪ್ರಕರಣದ ವಿಚಾರಣೆ ಜೂನ್ 2 ರಂದು ನಡೆಯಲಿದೆ.

5 ಜಿ ತಂತ್ರಜ್ಞಾನ ಜಾರಿಗೆ ಬಂದರೆ ಭೂಮಿಯ ಮೇಲಿನ ಎಲ್ಲಾ ಜೀವಿಗಳು ವಿಕಿರಣಕ್ಕೆ ಒಳಗಾಗುತ್ತವೆ. ಅದು ಪ್ರಸ್ತುತ ಮಟ್ಟಕ್ಕಿಂತ 100 ಪಟ್ಟು ಹೆಚ್ಚಾಗುತ್ತದೆ. ಇದರಿಂದ ಮಾನವರ ಮೇಲೆ ಗಂಭೀರ ಮತ್ತು ಬದಲಾಯಿಸಲಾಗದ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನ್ಯಾಯಮೂರ್ತಿ ಸಿ.ಹರಿ ಶಂಕರ್  ಪ್ರಕರಣದ ವಿಚಾರಣೆಯನ್ನು ಜೂನ್ 2ಕ್ಕೆ ನಿಗದಿಗೊಳಿಸಿ, ವಿಚಾರಣೆಗೆ ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದ್ದಾರೆ.

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ತಾಂತ್ರಿಕ ಪ್ರಗತಿಯ ಅನುಷ್ಠಾನಕ್ಕೆ ತಾನು ವಿರೋಧಿಯಲ್ಲದಿದ್ದರೂ, “ವಿಕಿರಣವು ಅತ್ಯಂತ ಅಪಾಯಕಾರಿ ಮತ್ತು ಜನರ ಆರೋಗ್ಯ ಮತ್ತು ಸುರಕ್ಷತೆಗೆ ಹಾನಿಕಾರಕವಾಗಿದೆ ಎಂಬುದಕ್ಕೆ ಸಾಕಷ್ಟು ಕಾರಣಗಳಿವೆ” ಎಂದು ನಟಿ ಜೂಹಿ ಚಾವ್ಲಾ ಹೇಳಿದ್ದಾರೆ.

ಕ್ಯಾನ್ಸರ್, ಹೃದ್ರೋಗ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ಇದು ಕಾರಣವಾಗುತ್ತದೆ. ಸಸ್ಯ ಮತ್ತು ಪ್ರಾಣಿಗಳಲ್ಲಿನ ಡಿಎನ್‌ಎ, ಜೀವಕೋಶಗಳು ಮತ್ತು ಅಂಗ ವ್ಯವಸ್ಥೆಗಳಿಗೆ ಹಾನಿಯಾಗಿದೆ ಎಂಬ ಬಗ್ಗೆ ಕ್ಲಿನಿಕಲ್ ಮತ್ತು ಪ್ರಾಯೋಗಿಕ ಪುರಾವೆಗಳನ್ನು ವಕೀಲ ದೀಪಕ್ ಖೋಸ್ಲಾ ಅವರ ಮೂಲಕ ಅರ್ಜಿಯಲ್ಲಿ ಜೂಹಿ ಚಾವ್ಲಾ ಸಲ್ಲಿಸಿದ್ದಾರೆ.

ಭಾರತದಲ್ಲಿ 5 ಜಿ ಪ್ರಯೋಗಗಳನ್ನು ನಡೆಸಲು ದೂರಸಂಪರ್ಕ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರತಿ ಏರ್‌ಟೆಲ್, ವೊಡಾಫೋನ್ ಐಡಿಯಾ ಮತ್ತು ಎಂಟಿಎನ್‌ಎಲ್ ಅರ್ಜಿಗಳನ್ನು ಈ ತಿಂಗಳ ಆರಂಭದಲ್ಲಿ ಟೆಲಿಕಾಂ ಇಲಾಖೆ (ಡಿಒಟಿ) ಅನುಮೋದಿಸಿತು. ಸರ್ಕಾರದ ಆದೇಶದಂತೆ ಚೀನಾದ ತಂತ್ರಜ್ಞಾನ ಅಥವಾ ಘಟಕಗಳಿಲ್ಲದೆ ಪ್ರಯೋಗಗಳನ್ನು ನಡೆಸಲು ಕಂಪನಿಗಳಿಗೆ ಸೂಚಿಸಲಾಗಿದೆ.

ದೆಹಲಿ, ಮುಂಬೈ, ಕೋಲ್ಕತಾ, ಬೆಂಗಳೂರು, ಗುಜರಾತ್ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪ್ರಯೋಗಗಳನ್ನು ನಡೆಸಲಾಗುವುದು. ಟೆಲಿಕಾಂ ಇಲಾಖೆ ಪ್ರಕಾರ, 5 ಜಿ ತಂತ್ರಜ್ಞಾನವು 4 ಜಿ ಗಿಂತ 10 ಪಟ್ಟು ಉತ್ತಮ ಡೌನ್‌ಲೋಡ್ ವೇಗವನ್ನು ಮತ್ತು ಮೂರು ಪಟ್ಟು ಹೆಚ್ಚಿನ ಸ್ಪೆಕ್ಟ್ರಮ್ ದಕ್ಷತೆಯನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...