Homeಮುಖಪುಟ5 ಜಿ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ನಟಿ ಜೂಹಿ ಚಾವ್ಲಾ ಅರ್ಜಿ

5 ಜಿ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ನಟಿ ಜೂಹಿ ಚಾವ್ಲಾ ಅರ್ಜಿ

- Advertisement -
- Advertisement -

ಭಾರತದಲ್ಲಿ 5 ಜಿ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ನಟಿ ಜೂಹಿ ಚಾವ್ಲಾ ಸೋಮವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ನಾಗರಿಕರು, ಸಸ್ಯ ಮತ್ತು ಪ್ರಾಣಿಗಳ ಮೇಲೆ ವಿಕಿರಣ ಬೀರುವ ಪರಿಣಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿದ್ದಾರೆ. ಪ್ರಕರಣದ ವಿಚಾರಣೆ ಜೂನ್ 2 ರಂದು ನಡೆಯಲಿದೆ.

5 ಜಿ ತಂತ್ರಜ್ಞಾನ ಜಾರಿಗೆ ಬಂದರೆ ಭೂಮಿಯ ಮೇಲಿನ ಎಲ್ಲಾ ಜೀವಿಗಳು ವಿಕಿರಣಕ್ಕೆ ಒಳಗಾಗುತ್ತವೆ. ಅದು ಪ್ರಸ್ತುತ ಮಟ್ಟಕ್ಕಿಂತ 100 ಪಟ್ಟು ಹೆಚ್ಚಾಗುತ್ತದೆ. ಇದರಿಂದ ಮಾನವರ ಮೇಲೆ ಗಂಭೀರ ಮತ್ತು ಬದಲಾಯಿಸಲಾಗದ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನ್ಯಾಯಮೂರ್ತಿ ಸಿ.ಹರಿ ಶಂಕರ್  ಪ್ರಕರಣದ ವಿಚಾರಣೆಯನ್ನು ಜೂನ್ 2ಕ್ಕೆ ನಿಗದಿಗೊಳಿಸಿ, ವಿಚಾರಣೆಗೆ ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದ್ದಾರೆ.

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ತಾಂತ್ರಿಕ ಪ್ರಗತಿಯ ಅನುಷ್ಠಾನಕ್ಕೆ ತಾನು ವಿರೋಧಿಯಲ್ಲದಿದ್ದರೂ, “ವಿಕಿರಣವು ಅತ್ಯಂತ ಅಪಾಯಕಾರಿ ಮತ್ತು ಜನರ ಆರೋಗ್ಯ ಮತ್ತು ಸುರಕ್ಷತೆಗೆ ಹಾನಿಕಾರಕವಾಗಿದೆ ಎಂಬುದಕ್ಕೆ ಸಾಕಷ್ಟು ಕಾರಣಗಳಿವೆ” ಎಂದು ನಟಿ ಜೂಹಿ ಚಾವ್ಲಾ ಹೇಳಿದ್ದಾರೆ.

ಕ್ಯಾನ್ಸರ್, ಹೃದ್ರೋಗ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ಇದು ಕಾರಣವಾಗುತ್ತದೆ. ಸಸ್ಯ ಮತ್ತು ಪ್ರಾಣಿಗಳಲ್ಲಿನ ಡಿಎನ್‌ಎ, ಜೀವಕೋಶಗಳು ಮತ್ತು ಅಂಗ ವ್ಯವಸ್ಥೆಗಳಿಗೆ ಹಾನಿಯಾಗಿದೆ ಎಂಬ ಬಗ್ಗೆ ಕ್ಲಿನಿಕಲ್ ಮತ್ತು ಪ್ರಾಯೋಗಿಕ ಪುರಾವೆಗಳನ್ನು ವಕೀಲ ದೀಪಕ್ ಖೋಸ್ಲಾ ಅವರ ಮೂಲಕ ಅರ್ಜಿಯಲ್ಲಿ ಜೂಹಿ ಚಾವ್ಲಾ ಸಲ್ಲಿಸಿದ್ದಾರೆ.

ಭಾರತದಲ್ಲಿ 5 ಜಿ ಪ್ರಯೋಗಗಳನ್ನು ನಡೆಸಲು ದೂರಸಂಪರ್ಕ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರತಿ ಏರ್‌ಟೆಲ್, ವೊಡಾಫೋನ್ ಐಡಿಯಾ ಮತ್ತು ಎಂಟಿಎನ್‌ಎಲ್ ಅರ್ಜಿಗಳನ್ನು ಈ ತಿಂಗಳ ಆರಂಭದಲ್ಲಿ ಟೆಲಿಕಾಂ ಇಲಾಖೆ (ಡಿಒಟಿ) ಅನುಮೋದಿಸಿತು. ಸರ್ಕಾರದ ಆದೇಶದಂತೆ ಚೀನಾದ ತಂತ್ರಜ್ಞಾನ ಅಥವಾ ಘಟಕಗಳಿಲ್ಲದೆ ಪ್ರಯೋಗಗಳನ್ನು ನಡೆಸಲು ಕಂಪನಿಗಳಿಗೆ ಸೂಚಿಸಲಾಗಿದೆ.

ದೆಹಲಿ, ಮುಂಬೈ, ಕೋಲ್ಕತಾ, ಬೆಂಗಳೂರು, ಗುಜರಾತ್ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪ್ರಯೋಗಗಳನ್ನು ನಡೆಸಲಾಗುವುದು. ಟೆಲಿಕಾಂ ಇಲಾಖೆ ಪ್ರಕಾರ, 5 ಜಿ ತಂತ್ರಜ್ಞಾನವು 4 ಜಿ ಗಿಂತ 10 ಪಟ್ಟು ಉತ್ತಮ ಡೌನ್‌ಲೋಡ್ ವೇಗವನ್ನು ಮತ್ತು ಮೂರು ಪಟ್ಟು ಹೆಚ್ಚಿನ ಸ್ಪೆಕ್ಟ್ರಮ್ ದಕ್ಷತೆಯನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...