Homeಮುಖಪುಟಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

ಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ಮತ್ತು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ತಮ್ಮ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ, ಕೇರಳ ವಿಧಾನಸಭೆಗೆ ಎರಡು ಬಾರಿ ಆಯ್ಕೆಯಾಗಿರುವ ಸಿಪಿ (ಎಂ) ಶಾಸಕ ಸೇರಿದಂತೆ ಹಲವು ನಟರಿಂದ ಲೈಂಗಿಕ ದೌರ್ಜನ್ಯ ಎದುರಿಸಿದ್ದಾಗಿ ನಟಿ ಮಿನು ಮುನೀರ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಿನು ಮುನೀರ್, ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಖೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ಅವರನ್ನು ಹೆಸರಿಸಿದ್ದಾರೆ. ಮಿನು ಮುನೀರ್ ಅವರ ಆರೋಪಗಳಿಗೆ ಮುಖೇಶ್, ಜಯಸೂರ್ಯ ಮತ್ತು ಬಾಬು ಪ್ರತಿಕ್ರಿಯಿಸಿಲ್ಲ. ರಾಜು ಮಾತ್ರ ತನಿಖೆಗೆ ಸ್ವಾಗತ ಎಂದಿದ್ದಾರೆ.

“ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ತನಿಖೆಗೆ ನಿಯೋಜಿಸಲಾದ ರಾಜ್ಯ ಪೊಲೀಸ್ ತಂಡಕ್ಕೆ ನಾನು ದೂರು ನೀಡುತ್ತೇನೆ” ಎಂದು ಮಿನು ಮುನೀರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಕ್ಯಾಲೆಂಡರ್’ ಮತ್ತು 2011ರಲ್ಲಿ ತೆರೆಕಂಡ ‘ನಾಡಗಮೆ ಉಲಗಂ’ ಚಿತ್ರಗಳ ಚಿತ್ರೀಕರಣದ ಸಮಯದಲ್ಲಿ ಹೋಟೆಲ್‌ನಲ್ಲಿ ನಟರೊಬ್ಬರು ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಮಿನು ದೂರಿದ್ದಾರೆ.

“ಆತ (ನಟ) ನನ್ನ ಕೊಠಡಿಗೆ ಬಂದು ನನ್ನನ್ನು ಎಳೆದು ಬೆಡ್ ಮೇಲೆ ಹಾಕಿದರು. ಬಳಿಕ ಉತ್ತಮ ಅವಕಾಶಕ್ಕಾಗಿ ನಾನು ಪರಿಗಣಿಸಬೇಕಾದವರನ್ನು ಪರಿಗಣಿಸಬೇಕು ಎಂದು ಹೇಳಿದರು. ಬಳಿಕ ನಾನು ಅಲ್ಲಿಂದ ಹೊರಟೆ..ಅದಕ್ಕೂ ಮುನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಮತ್ತೊಬ್ಬ ನಟ ರಾತ್ರಿ ನನ್ನ ಕೋಣೆಗೆ ಬರುವುದಾಗಿ ಹೇಳಿದ್ದರು. ಮರುದಿನ ರಾತ್ರಿ ಅವರು ಬಂದು ನನ್ನ ಕೋಣೆಯ ಬಾಗಿಲು ತಟ್ಟಿದ್ದರು” ಮಿನು ಹೇಳಿದ್ದಾರೆ.

2008ರಲ್ಲಿ ಇನ್ನೋರ್ವ ನಟ ದುರ್ವರ್ತನೆ ತೋರಿರುವುದಾಗಿ ಮಿನು ವಿವರಿಸಿದ್ದಾರೆ.

“ರಾಜ್ಯ ರಾಜಧಾನಿಯಲ್ಲಿ ಚಿತ್ರೀಕರಣದ ಸಮಯದಲ್ಲಿ, ನಾನು ವಿಶ್ರಾಂತಿ ಕೊಠಡಿಯಿಂದ ಹಿಂತಿರುಗುತ್ತಿದ್ದಾಗ, ನಟರೊಬ್ಬರು ನನ್ನನ್ನು ಹಿಂದಿನಿಂದ ತಬ್ಬಿ ಹಿಡಿದು ಮುತ್ತಿಕ್ಕಿದರು. ನಾನು ಅವರನ್ನು ತಳ್ಳಿ ಓಡಿಹೋದೆ. ನನ್ನನ್ನು ಅವರ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಆ ಆಹ್ವಾನವನ್ನು ತಿರಸ್ಕರಿಸಿದ ನಂತರ, ಅವರ ಕಡೆಯಿಂದ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮಿನು ಹೇಳಿಕೊಂಡಿದ್ದಾರೆ.

“2013ರಲ್ಲಿ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ನಾನು ಮುಂದಾಗಿದ್ದೆ. ಆಗ ಅರ್ಜಿ ನಮೂನೆ ಭರ್ತಿ ಮಾಡುವ ಬಗ್ಗೆ ತಿಳಿಯಲು ನಾನು ನಟರೊಬ್ಬರಿಗೆ ಫೋನ್‌ ಕರೆ ಮಾಡಿದಾಗ, ಅವರು ನನ್ನನ್ನು ತಮ್ಮ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಅವರ ಫ್ಲಾಟ್‌ನಲ್ಲಿ ಅರ್ಜಿ ನಮೂನೆ ತುಂಬುತ್ತಿದ್ದಾಗ ಅವರು ಹಿಂದಿನಿಂದ ನನ್ನ ಕತ್ತಿಗೆ ಮುತ್ತಿಟ್ಟರು. ನಾನು ಫ್ಲಾಟ್‌ನಿಂದ ಹೊರಗೆ ಓಡಿದೆ. ನನಗೆ ಇದುವರೆಗೆ ಸದಸ್ಯತ್ವ ಸಿಕ್ಕಿಲ್ಲ” ವಿವರಿಸಿದ್ದಾರೆ.

“ಈ ರೀತಿಯ ‘ಅನುಭವಗಳಿಂದ’ ನಾನು ಮಲಯಾಳಂ ಚಲನಚಿತ್ರೋದ್ಯಮ ತೊರೆದು ಚೆನ್ನೈಗೆ ಸ್ಥಳಾಂತರಗೊಳ್ಳುವಂತೆ ಆಯಿತು” ಎಂದು ಮಿನು ಮುನೀರ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ತನಿಖೆಗೆ ಪೊಲೀಸ್ ತಂಡ ರಚಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...