Homeಮುಖಪುಟಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

ಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ಮತ್ತು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ತಮ್ಮ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ, ಕೇರಳ ವಿಧಾನಸಭೆಗೆ ಎರಡು ಬಾರಿ ಆಯ್ಕೆಯಾಗಿರುವ ಸಿಪಿ (ಎಂ) ಶಾಸಕ ಸೇರಿದಂತೆ ಹಲವು ನಟರಿಂದ ಲೈಂಗಿಕ ದೌರ್ಜನ್ಯ ಎದುರಿಸಿದ್ದಾಗಿ ನಟಿ ಮಿನು ಮುನೀರ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಿನು ಮುನೀರ್, ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಖೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ಅವರನ್ನು ಹೆಸರಿಸಿದ್ದಾರೆ. ಮಿನು ಮುನೀರ್ ಅವರ ಆರೋಪಗಳಿಗೆ ಮುಖೇಶ್, ಜಯಸೂರ್ಯ ಮತ್ತು ಬಾಬು ಪ್ರತಿಕ್ರಿಯಿಸಿಲ್ಲ. ರಾಜು ಮಾತ್ರ ತನಿಖೆಗೆ ಸ್ವಾಗತ ಎಂದಿದ್ದಾರೆ.

“ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ತನಿಖೆಗೆ ನಿಯೋಜಿಸಲಾದ ರಾಜ್ಯ ಪೊಲೀಸ್ ತಂಡಕ್ಕೆ ನಾನು ದೂರು ನೀಡುತ್ತೇನೆ” ಎಂದು ಮಿನು ಮುನೀರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಕ್ಯಾಲೆಂಡರ್’ ಮತ್ತು 2011ರಲ್ಲಿ ತೆರೆಕಂಡ ‘ನಾಡಗಮೆ ಉಲಗಂ’ ಚಿತ್ರಗಳ ಚಿತ್ರೀಕರಣದ ಸಮಯದಲ್ಲಿ ಹೋಟೆಲ್‌ನಲ್ಲಿ ನಟರೊಬ್ಬರು ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಮಿನು ದೂರಿದ್ದಾರೆ.

“ಆತ (ನಟ) ನನ್ನ ಕೊಠಡಿಗೆ ಬಂದು ನನ್ನನ್ನು ಎಳೆದು ಬೆಡ್ ಮೇಲೆ ಹಾಕಿದರು. ಬಳಿಕ ಉತ್ತಮ ಅವಕಾಶಕ್ಕಾಗಿ ನಾನು ಪರಿಗಣಿಸಬೇಕಾದವರನ್ನು ಪರಿಗಣಿಸಬೇಕು ಎಂದು ಹೇಳಿದರು. ಬಳಿಕ ನಾನು ಅಲ್ಲಿಂದ ಹೊರಟೆ..ಅದಕ್ಕೂ ಮುನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಮತ್ತೊಬ್ಬ ನಟ ರಾತ್ರಿ ನನ್ನ ಕೋಣೆಗೆ ಬರುವುದಾಗಿ ಹೇಳಿದ್ದರು. ಮರುದಿನ ರಾತ್ರಿ ಅವರು ಬಂದು ನನ್ನ ಕೋಣೆಯ ಬಾಗಿಲು ತಟ್ಟಿದ್ದರು” ಮಿನು ಹೇಳಿದ್ದಾರೆ.

2008ರಲ್ಲಿ ಇನ್ನೋರ್ವ ನಟ ದುರ್ವರ್ತನೆ ತೋರಿರುವುದಾಗಿ ಮಿನು ವಿವರಿಸಿದ್ದಾರೆ.

“ರಾಜ್ಯ ರಾಜಧಾನಿಯಲ್ಲಿ ಚಿತ್ರೀಕರಣದ ಸಮಯದಲ್ಲಿ, ನಾನು ವಿಶ್ರಾಂತಿ ಕೊಠಡಿಯಿಂದ ಹಿಂತಿರುಗುತ್ತಿದ್ದಾಗ, ನಟರೊಬ್ಬರು ನನ್ನನ್ನು ಹಿಂದಿನಿಂದ ತಬ್ಬಿ ಹಿಡಿದು ಮುತ್ತಿಕ್ಕಿದರು. ನಾನು ಅವರನ್ನು ತಳ್ಳಿ ಓಡಿಹೋದೆ. ನನ್ನನ್ನು ಅವರ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಆ ಆಹ್ವಾನವನ್ನು ತಿರಸ್ಕರಿಸಿದ ನಂತರ, ಅವರ ಕಡೆಯಿಂದ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮಿನು ಹೇಳಿಕೊಂಡಿದ್ದಾರೆ.

“2013ರಲ್ಲಿ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ನಾನು ಮುಂದಾಗಿದ್ದೆ. ಆಗ ಅರ್ಜಿ ನಮೂನೆ ಭರ್ತಿ ಮಾಡುವ ಬಗ್ಗೆ ತಿಳಿಯಲು ನಾನು ನಟರೊಬ್ಬರಿಗೆ ಫೋನ್‌ ಕರೆ ಮಾಡಿದಾಗ, ಅವರು ನನ್ನನ್ನು ತಮ್ಮ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಅವರ ಫ್ಲಾಟ್‌ನಲ್ಲಿ ಅರ್ಜಿ ನಮೂನೆ ತುಂಬುತ್ತಿದ್ದಾಗ ಅವರು ಹಿಂದಿನಿಂದ ನನ್ನ ಕತ್ತಿಗೆ ಮುತ್ತಿಟ್ಟರು. ನಾನು ಫ್ಲಾಟ್‌ನಿಂದ ಹೊರಗೆ ಓಡಿದೆ. ನನಗೆ ಇದುವರೆಗೆ ಸದಸ್ಯತ್ವ ಸಿಕ್ಕಿಲ್ಲ” ವಿವರಿಸಿದ್ದಾರೆ.

“ಈ ರೀತಿಯ ‘ಅನುಭವಗಳಿಂದ’ ನಾನು ಮಲಯಾಳಂ ಚಲನಚಿತ್ರೋದ್ಯಮ ತೊರೆದು ಚೆನ್ನೈಗೆ ಸ್ಥಳಾಂತರಗೊಳ್ಳುವಂತೆ ಆಯಿತು” ಎಂದು ಮಿನು ಮುನೀರ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ತನಿಖೆಗೆ ಪೊಲೀಸ್ ತಂಡ ರಚಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...