Homeಮುಖಪುಟಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

ಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ಮತ್ತು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ತಮ್ಮ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ, ಕೇರಳ ವಿಧಾನಸಭೆಗೆ ಎರಡು ಬಾರಿ ಆಯ್ಕೆಯಾಗಿರುವ ಸಿಪಿ (ಎಂ) ಶಾಸಕ ಸೇರಿದಂತೆ ಹಲವು ನಟರಿಂದ ಲೈಂಗಿಕ ದೌರ್ಜನ್ಯ ಎದುರಿಸಿದ್ದಾಗಿ ನಟಿ ಮಿನು ಮುನೀರ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಿನು ಮುನೀರ್, ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಖೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ಅವರನ್ನು ಹೆಸರಿಸಿದ್ದಾರೆ. ಮಿನು ಮುನೀರ್ ಅವರ ಆರೋಪಗಳಿಗೆ ಮುಖೇಶ್, ಜಯಸೂರ್ಯ ಮತ್ತು ಬಾಬು ಪ್ರತಿಕ್ರಿಯಿಸಿಲ್ಲ. ರಾಜು ಮಾತ್ರ ತನಿಖೆಗೆ ಸ್ವಾಗತ ಎಂದಿದ್ದಾರೆ.

“ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ತನಿಖೆಗೆ ನಿಯೋಜಿಸಲಾದ ರಾಜ್ಯ ಪೊಲೀಸ್ ತಂಡಕ್ಕೆ ನಾನು ದೂರು ನೀಡುತ್ತೇನೆ” ಎಂದು ಮಿನು ಮುನೀರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಕ್ಯಾಲೆಂಡರ್’ ಮತ್ತು 2011ರಲ್ಲಿ ತೆರೆಕಂಡ ‘ನಾಡಗಮೆ ಉಲಗಂ’ ಚಿತ್ರಗಳ ಚಿತ್ರೀಕರಣದ ಸಮಯದಲ್ಲಿ ಹೋಟೆಲ್‌ನಲ್ಲಿ ನಟರೊಬ್ಬರು ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಮಿನು ದೂರಿದ್ದಾರೆ.

“ಆತ (ನಟ) ನನ್ನ ಕೊಠಡಿಗೆ ಬಂದು ನನ್ನನ್ನು ಎಳೆದು ಬೆಡ್ ಮೇಲೆ ಹಾಕಿದರು. ಬಳಿಕ ಉತ್ತಮ ಅವಕಾಶಕ್ಕಾಗಿ ನಾನು ಪರಿಗಣಿಸಬೇಕಾದವರನ್ನು ಪರಿಗಣಿಸಬೇಕು ಎಂದು ಹೇಳಿದರು. ಬಳಿಕ ನಾನು ಅಲ್ಲಿಂದ ಹೊರಟೆ..ಅದಕ್ಕೂ ಮುನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಮತ್ತೊಬ್ಬ ನಟ ರಾತ್ರಿ ನನ್ನ ಕೋಣೆಗೆ ಬರುವುದಾಗಿ ಹೇಳಿದ್ದರು. ಮರುದಿನ ರಾತ್ರಿ ಅವರು ಬಂದು ನನ್ನ ಕೋಣೆಯ ಬಾಗಿಲು ತಟ್ಟಿದ್ದರು” ಮಿನು ಹೇಳಿದ್ದಾರೆ.

2008ರಲ್ಲಿ ಇನ್ನೋರ್ವ ನಟ ದುರ್ವರ್ತನೆ ತೋರಿರುವುದಾಗಿ ಮಿನು ವಿವರಿಸಿದ್ದಾರೆ.

“ರಾಜ್ಯ ರಾಜಧಾನಿಯಲ್ಲಿ ಚಿತ್ರೀಕರಣದ ಸಮಯದಲ್ಲಿ, ನಾನು ವಿಶ್ರಾಂತಿ ಕೊಠಡಿಯಿಂದ ಹಿಂತಿರುಗುತ್ತಿದ್ದಾಗ, ನಟರೊಬ್ಬರು ನನ್ನನ್ನು ಹಿಂದಿನಿಂದ ತಬ್ಬಿ ಹಿಡಿದು ಮುತ್ತಿಕ್ಕಿದರು. ನಾನು ಅವರನ್ನು ತಳ್ಳಿ ಓಡಿಹೋದೆ. ನನ್ನನ್ನು ಅವರ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಆ ಆಹ್ವಾನವನ್ನು ತಿರಸ್ಕರಿಸಿದ ನಂತರ, ಅವರ ಕಡೆಯಿಂದ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮಿನು ಹೇಳಿಕೊಂಡಿದ್ದಾರೆ.

“2013ರಲ್ಲಿ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ನಾನು ಮುಂದಾಗಿದ್ದೆ. ಆಗ ಅರ್ಜಿ ನಮೂನೆ ಭರ್ತಿ ಮಾಡುವ ಬಗ್ಗೆ ತಿಳಿಯಲು ನಾನು ನಟರೊಬ್ಬರಿಗೆ ಫೋನ್‌ ಕರೆ ಮಾಡಿದಾಗ, ಅವರು ನನ್ನನ್ನು ತಮ್ಮ ಫ್ಲಾಟ್‌ಗೆ ಆಹ್ವಾನಿಸಿದ್ದರು. ನಾನು ಅವರ ಫ್ಲಾಟ್‌ನಲ್ಲಿ ಅರ್ಜಿ ನಮೂನೆ ತುಂಬುತ್ತಿದ್ದಾಗ ಅವರು ಹಿಂದಿನಿಂದ ನನ್ನ ಕತ್ತಿಗೆ ಮುತ್ತಿಟ್ಟರು. ನಾನು ಫ್ಲಾಟ್‌ನಿಂದ ಹೊರಗೆ ಓಡಿದೆ. ನನಗೆ ಇದುವರೆಗೆ ಸದಸ್ಯತ್ವ ಸಿಕ್ಕಿಲ್ಲ” ವಿವರಿಸಿದ್ದಾರೆ.

“ಈ ರೀತಿಯ ‘ಅನುಭವಗಳಿಂದ’ ನಾನು ಮಲಯಾಳಂ ಚಲನಚಿತ್ರೋದ್ಯಮ ತೊರೆದು ಚೆನ್ನೈಗೆ ಸ್ಥಳಾಂತರಗೊಳ್ಳುವಂತೆ ಆಯಿತು” ಎಂದು ಮಿನು ಮುನೀರ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ತನಿಖೆಗೆ ಪೊಲೀಸ್ ತಂಡ ರಚಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...